ರಾಮಲಲ್ಲಾಗೆ ಕಿರೀಟ ಅರ್ಪಿಸಿದ ಉದ್ಯಮಿ 
ದೇಶ

ಅಯೋಧ್ಯೆ: ರಾಮ ಲಲ್ಲಾಗೆ 11 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಿಸಿದ ಸೂರತ್ ಉದ್ಯಮಿ!

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮ ಲಲ್ಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮ ಲಲ್ಲಾನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದಾರೆ.

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮ ಲಲ್ಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮ ಲಲ್ಲಾನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದಾರೆ.

ಆ ಮೂಲಕ ಕೋಟ್ಯಂತರ ಭಾರತೀಯರ 500 ವರ್ಷಗಳ ಕನಸು ನನಸಾದಂತಾಗಿದೆ. ಇದರ ಬೆನ್ನಲ್ಲೇ, ಗುಜರಾತ್‌ ಮೂಲದ ವಜ್ರದ ವ್ಯಾಪಾರಿ ಮುಕೇಶ್‌ ಪಟೇಲ್‌ ಎಂಬುವರು ರಾಮಲಲ್ಲಾನಿಗೆ ಸುಮಾರು 11 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸೂರತ್‌ನಲ್ಲಿ ಗ್ರೀನ್ ಲ್ಯಾಬ್ ಡೈಮಂಡ್‌ ಕಂಪನಿಯ ಮಾಲೀಕರಾಗಿರುವ, ರಾಮನ ಮೇಲೆ ಅಪಾರ ನಂಬಿಕೆ ಇಟ್ಟಿರುವ ಮುಕೇಶ್‌ ಪಟೇಲ್‌ ಕುಟುಂಬಸ್ಥರು 11 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಕೊಡುಗೆಯಾಗಿ ಕೊಟ್ಟು ರಾಮನ ಮೇಲಿನ ಭಕ್ತಿ ಮೆರೆದಿದ್ದಾರೆ.

ಚಿನ್ನ, ಮುತ್ತುಗಳು ಹಾಗೂ ವಜ್ರಗಳಿಂದ ಉತ್ತರ ಭಾರತ ಶೈಲಿಯಲ್ಲಿ ಕಿರೀಟವನ್ನು ತಯಾರಿಸಲಾಗಿದೆ. ಮುಕೇಶ್‌ ಪಟೇಲ್‌ ಅವರ ಕಂಪನಿಯ ಇಬ್ಬರು ಉದ್ಯೋಗಿಗಳು ಅಯೋಧ್ಯೆಗೆ ಬಂದು, ರಾಮಲಲ್ಲಾ ಮೂರ್ತಿಯ ಅಳತೆಯನ್ನು ತೆಗೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಕಿರೀಟವನ್ನು ತಯಾರಿಸಲಾಗಿದೆ ಎಂದು ತಿಳಿದುಬಂದಿದೆ.

ನಮ್ಮ ಇಡೀ ಕುಟುಂಬವು ರಾಮನ ಮೇಲೆ ಅಪಾರ ಭಕ್ತಿಯನ್ನು ಹೊಂದಿದೆ. ನಮ್ಮ ಪೂರ್ವಜರು ಕೂಡ ಅಯೋಧ್ಯೆಯಲ್ಲೊಂದು ರಾಮಮಂದಿರ ನಿರ್ಮಾಣವಾಗಬೇಕು ಎಂಬ ಕನಸು ಕಂಡಿದ್ದರು. ರಾಮಮಂದಿರದ ಕನಸು ಈಗ ನನಸಾಗಿದೆ. ಇದರಿಂದ ನಮ್ಮ ಕುಟುಂಬವು ಸಂತಸದ ಕಡಲಲ್ಲಿ ಮುಳುಗಿಸಿದೆ. ಭಗವಾನ್‌ ಶ್ರೀರಾಮನು ನಮಗೆ ಸಾಕಷ್ಟು ಕೊಟ್ಟಿದ್ದಾನೆ. ಈಗ ನಾವು ರಾಮಲಲ್ಲಾನಿಗೆ ಕಿರೀಟ ನೀಡುವ ಮೂಲಕ ಸಣ್ಣ ಕೊಡುಗೆ ಕೊಟ್ಟಿದ್ದೇವೆ. ರಾಮನ ದರ್ಶನ ಪಡೆದಿರುವುದು ಕೂಡ ನಮ್ಮ ಸೌಭಾಗ್ಯ” ಎಂದು ಮುಕೇಶ್‌ ಪಟೇಲ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT