ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ನೇತಾಜಿಗೆ ಏನಾಯಿತು ಎಂದು ಇಂದಿಗೂ ನಮಗೆ ತಿಳಿದಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿ: ಮಮತಾ ಬ್ಯಾನರ್ಜಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಕಣ್ಮರೆಯಾಗಿ ಇಷ್ಟು ವರ್ಷಗಳಾದರೂ ಅವರಿಗೆ ಏನಾಯಿತು. ಅವರ ಮರಣದ ದಿನಾಂಕದ ಬಗ್ಗೆ ಜನರಿಗೆ ತಿಳಿದಿಲ್ಲದಿರುವುದು ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಕಣ್ಮರೆಯಾಗಿ ಇಷ್ಟು ವರ್ಷಗಳಾದರೂ ಅವರಿಗೆ ಏನಾಯಿತು. ಅವರ ಮರಣದ ದಿನಾಂಕದ ಬಗ್ಗೆ ಜನರಿಗೆ ತಿಳಿದಿಲ್ಲದಿರುವುದು ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನೇತಾಜಿ ನಾಪತ್ತೆ ಪ್ರಕರಣದ ತನಿಖೆ ನಡೆಸುವ ಭರವಸೆಯನ್ನು ಈಡೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ ಅವರು, ರಾಮ ಮಂದಿರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಕೇಂದ್ರ ಸರ್ಕಾರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿತ್ತು. ಈ ದಿನಗಳಲ್ಲಿ ರಾಜಕೀಯ ಜಾಹೀರಾತುಗಳಿಗೆ ರಜೆ ಘೋಷಿಸಲಾಗುತ್ತಿದೆ. ಆದರೆ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗಾಗಿ ಏನನ್ನು ಘೋಷಿಸಿಲ್ಲ ಎಂದರು.

ನೇತಾಜಿಯವರ 127ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬೋಸ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಮಮತಾ, ಇಷ್ಟು ವರ್ಷ ಕಳೆದರೂ ನೇತಾಜಿ ನಿಧನದ ದಿನಾಂಕ ನಮ್ಮ ಬಳಿ ಇಲ್ಲದಿರುವುದು ಭಾರತದ ದೌರ್ಭಾಗ್ಯ ಎಂದರು. ಅವರಿಗೆ ಏನಾಯಿತು ಎಂದು ನಮಗೆ ತಿಳಿದಿಲ್ಲ. ಇದು ಮುಜುಗರದ ಸಂಗತಿ ಎಂದರು.

ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೇತಾಜಿ ನಾಪತ್ತೆ ಪ್ರಕರಣದ ತನಿಖೆ ನಡೆಸುವುದಾಗಿ ಭರವಸೆ ನೀಡಿತ್ತು. ಆದರೆ ನಂತರ ಅದನ್ನು ಮರೆತಿದೆ. ನೇತಾಜಿಯವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ನಾನು 20 ವರ್ಷಗಳಿಂದ ಪ್ರಯತ್ನಿಸಿದ್ದೇನೆ. ಆದರೆ ಅದು ವಿಫಲವಾಗಿದೆ, ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT