ನವಜಾತ ಶಿಶುವಿನೊಂದಿಗೆ ತಾಯಿಯೊಬ್ಬರ ಚಿತ್ರ 
ದೇಶ

ರಾಮಲಲ್ಲಾ ಪ್ರತಿಷ್ಠಾಪನೆ ದಿನ ಹುಟ್ಟಿದ್ದ ಹಲವು ಮಕ್ಕಳಿಗೆ 'ರಾಮ, ಸೀತಾ' ​​ಹೆಸರು ನಾಮಕರಣ!

ಅಯೋಧ್ಯೆಯ ರಾಮಮಂದಿರದ ಐತಿಹಾಸಿಕ ರಾಮಲಲ್ಲಾ ಪ್ರಾಣ  ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಸೋಮವಾರ  ಒಡಿಶಾದ ಕೇಂದ್ರಪಾರದಲ್ಲಿ ಜನಿಸಿದ ಹಲವಾರು ಶಿಶುಗಳಿಗೆ ಅವರ ಪೋಷಕರು ‘ರಾಮ’ ಮತ್ತು ‘ಸೀತಾ’ ಎಂದು ನಾಮಕರಣ ಮಾಡಿದ್ದಾರೆ.

ಕೇಂದ್ರಪಾರ: ಅಯೋಧ್ಯೆಯ ರಾಮಮಂದಿರದ ಐತಿಹಾಸಿಕ ರಾಮಲಲ್ಲಾ ಪ್ರಾಣ  ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಸೋಮವಾರ  ಒಡಿಶಾದ ಕೇಂದ್ರಪಾರದಲ್ಲಿ ಜನಿಸಿದ ಹಲವಾರು ಶಿಶುಗಳಿಗೆ ಅವರ ಪೋಷಕರು ‘ರಾಮ’ ಮತ್ತು ‘ಸೀತಾ’ ಎಂದು ನಾಮಕರಣ ಮಾಡಿದ್ದಾರೆ. ರಾಜಕಾಣಿಕಾ ನಗರದ ಪ್ರಿಯಾಂಕಾ ಮಲ್ಲಿಕ್, ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿದ ಕೆಲವೇ ನಿಮಿಷಗಳಲ್ಲಿ  ಮಧ್ಯಾಹ್ನ 1 ಗಂಟೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆಕೆಯ ಪೋಷಕರು ಆ ಮಗುವಿಗೆ ಸೀತಾ ಎಂದು ನಾಮಕರಣ ಮಾಡಿದ್ದಾರೆ.

ನಮ್ಮ ಇತಿಹಾಸದಲ್ಲಿ ಮಂಗಳಕರ ಮತ್ತು ಮಹತ್ವದ ದಿನದಂದು ಜನಿಸಿದ ಬಾಲಕಿಗೆ ಸೀತಾ ಎಂದು ಹೆಸರಿಸಲು ನಾವು ನಿರ್ಧರಿಸಿದ್ದೇವೆ" ಎಂದು ಪ್ರಿಯಾಂಕಾ ಅವರ ಪತಿ ನಾರಾಯಣ್  ಹೇಳಿದರು. ಅದೇ ರೀತಿ, ಮಹಾಕಲಪದ ಅಡೋಯಿ ಗ್ರಾಮದ ರೇಣುಬಾಲಾ ರೌತ್ (24) ಕೇಂದ್ರಪಾರ ಪಟ್ಟಣದ ಖಾಸಗಿ ನರ್ಸಿಂಗ್ ಹೋಂನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ರಾಮ ಎಂದು ಹೆಸರಿಡಲು ನಿರ್ಧರಿಸಿರುವುದಾಗಿ ತಿಳಿಸಿದರು.

ಅಲ್ಲದೆ, ಶೀಘ್ರದಲ್ಲೇ ಅಯೋಧ್ಯೆಗೆ ಭೇಟಿ ನೀಡಲು ಯೋಜಿಸುತ್ತಿದ್ದೇವೆ ಎಂದು ರೇಣುಬಾಲಾ ಅವರ ಪತಿ ಅಜಯ್ ಹೇಳಿದ್ದಾರೆ. ಅದೇ ರೀತಿ ಬಡಪಳ ಗ್ರಾಮದ ಭಾರತಿ ಸಾಹೂ (25)  ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಅವರು ಕೂಡಾ "ತಮ್ಮ ಮಗನಿಗೆ ರಾಮ ಎಂದು ಹೆಸರಿಡಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು. ಭಗಬತ್‌ಪುರ ಗ್ರಾಮದ ಬಂದನಾ ಜೆನಾ (28) ಕೇಂದ್ರಪಾರ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗಳಿಗೆ ಸೀತಾ ಎಂದು ಹೆಸರಿಟ್ಟಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT