ಪ್ರಧಾನಿ ಮೋದಿ 
ದೇಶ

ಅಯೋಧ್ಯೆಯಲ್ಲಿ ನೋಡಿದ್ದು, ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ: ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ನಿನ್ನೆ ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ನಿನ್ನೆ ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಮಾರಂಭದ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ, ಸೋಮವಾರದ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ ಎಂದು ಹೇಳಿದ್ದಾರೆ. 

ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿ ಛತ್ರಿ ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಧಾನಿ ಮೋದಿಯವರು ಪವಿತ್ರ ಸಮಾರಂಭದಲ್ಲಿ ಪಾಲ್ಗೊಂಡು ಹೊಸ ರಾಮ್ ಲಲ್ಲಾ ವಿಗ್ರಹದಿಂದ ಆಶೀರ್ವಾದ ತೆಗೆದುಕೊಳ್ಳುವುದು ವಿಡಿಯೋದಲ್ಲಿದೆ. 

ಜನವರಿ 22 "ಕ್ಯಾಲೆಂಡರ್‌ನಲ್ಲಿ ದಿನಾಂಕವಲ್ಲ, ಆದರೆ ಹೊಸ ಯುಗದ ಉದಯ. ಸಾವಿರಾರು ವರ್ಷಗಳ ನಂತರವೂ ಜನರು ಈ ದಿನಾಂಕ, ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ. ನಾವು ಇದನ್ನು ವೀಕ್ಷಿಸುತ್ತಿರುವುದು ರಾಮನ ಪರಮ ಆಶೀರ್ವಾದವಾಗಿದೆ. ಇವು ಶಾಶ್ವತವಾದ ನೆನಪುಗಳು ಎಂದು ಸೋಮವಾರ ಪ್ರಧಾನಿ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT