ಅಸ್ಸಾಂನ ಗುವಾಹಟಿಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಗರತ್ತ ಕೈ ಬೀಸಿದರು 
ದೇಶ

'ನಾವು ಬ್ಯಾರಿಕೇಡ್ ಮುರಿದಿದ್ದೇವೆ, ಆದರೆ ಕಾನೂನು ಮುರಿಯುವುದಿಲ್ಲ; ಅಸ್ಸಾಂನಲ್ಲಿ ಸರ್ಕಾರ ರಚಿಸುತ್ತೇವೆ': ರಾಹುಲ್ ಗಾಂಧಿ

ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಹಿಡಿಯಲಾಗಿದ್ದು, ಇದನ್ನು ಖಂಡಿಸಿ ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗುವಾಹಟಿ: ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಹಿಡಿಯಲಾಗಿದ್ದು, ಇದನ್ನು ಖಂಡಿಸಿ ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಂತರ ನಗರದ ಹೊರವಲಯದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆಯೇ ಹೊರತು ಕಾನೂನನ್ನು ಮುರಿಯುವುದಿಲ್ಲ ಎಂದು ಹೇಳಿದರು. 

ಯಾತ್ರೆ ನಗರ ವ್ಯಾಪ್ತಿಗೆ ಬರದಂತೆ ಎರಡು ಕಡೆ ಬ್ಯಾರಿಕೇಡ್ ಹಾಕಿದ್ದ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಬಲಪ್ರಯೋಗ ಮಾಡಬೇಕಾಯಿತು. ರಾಹುಲ್ ಗಾಂಧಿಯವರು ಇಂದು ಬೆಳಗ್ಗೆ ಗುವಾಹಟಿಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ ದಾರಿಯಲ್ಲಿ ಕೆಲವು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳಿಂದ ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ ದೊರೆಯಿತು. 

ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅದೇ ಮಾರ್ಗದಲ್ಲಿ ಸಾಗಿದ್ದು, ನಮಗೆ ಮಾತ್ರ ಯಾತ್ರೆ ಸಾಗಲು ಅವಕಾಶ ನೀಡಲಿಲ್ಲ ಎಂದರು. 

"ನಾವು ದುರ್ಬಲರು ಎಂದು ನೀವು ಭಾವಿಸಬಾರದು. ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ ಹೊರತು ಕಾನೂನು ಮುರಿದಿಲ್ಲ ಎಂದು ಅವರು ತಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು. 

ವಿಶ್ವವಿದ್ಯಾನಿಲಯದಲ್ಲಿ ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ, ಆದರೆ ವಿದ್ಯಾರ್ಥಿಗಳು ನನ್ನ ಮಾತನ್ನು ಹೊರಗೆ ನಿಂತು ಕೇಳಿದರು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ ಎಂದ ಅವರು, ಅಸ್ಸಾಂನಲ್ಲಿ ಬಿಜೆಪಿಯನ್ನು ಸೋಲಿಸಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ರಚಿಸುತ್ತೇವೆ ಎಂದು ಗುಡುಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video