ಜ್ಞಾನವಾಪಿ ಮಸೀದಿ 
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಎಎಸ್‌ಐ ಸಮೀಕ್ಷಾ ವರದಿಯನ್ನು ಎರಡೂ ಕಡೆಯವರಿಗೂ ನೀಡಲು ವಾರಣಾಸಿ ಕೋರ್ಟ್ ಆದೇಶ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಮೂರು ತಿಂಗಳ ಸುದೀರ್ಘ ಎಎಸ್‌ಐ ವರದಿಯನ್ನು ಸಾರ್ವಜನಿಕಗೊಳಿಸಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಮೂರು ತಿಂಗಳ ಸುದೀರ್ಘ ಎಎಸ್‌ಐ ವರದಿಯನ್ನು ಸಾರ್ವಜನಿಕಗೊಳಿಸಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.

ಸಮೀಕ್ಷಾ ವರದಿಯ ಪ್ರತಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೂ ನೀಡಲಾಗುವುದು ಎಂದು ಹೇಳಿದೆ. ಎಎಸ್‌ಐ ಡಿಸೆಂಬರ್ 18ರಂದು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿತ್ತು. ಅದೇ ಸಮಯದಲ್ಲಿ ವರದಿಯನ್ನು ನೀಡುವಂತೆ ಹಿಂದೂ ಕಡೆಯವರು ಒತ್ತಾಯಿಸಿದ್ದರು. ಆದರೆ ಮುಸ್ಲಿಂ ಕಡೆಯ ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಬಹಿರಂಗಪಡಿಸಲು ಸಾಧ್ಯವಾಗಿರಲಿಲ್ಲ.

ವರದಿ ನೀಡಲು ನ್ಯಾಯಾಲಯ ಮೌಖಿಕ ಆದೇಶ ನೀಡಿದೆ ಎಂದು ಹಿಂದೂ ಪರ ವಕೀಲರು ಹೇಳುತ್ತಾರೆ. ಲಿಖಿತ ಆದೇಶವೂ ಶೀಘ್ರದಲ್ಲೇ ಬರಲಿದೆ. ಇದರ ನಂತರ, ವರದಿಯ ಪ್ರತಿಗಾಗಿ ಅರ್ಜಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯಾದ ಬಳಿಕ ನಾಳೆಯೊಳಗೆ ಎರಡೂ ಕಡೆಯವರಿಗೂ ವರದಿ ಸಿಗಲಿದೆ ಎಂಬ ನಂಬಿಕೆ ಇದೆ. ವರದಿಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಹಿಂದೂ ಪರ ವಕೀಲ ವಿಷ್ಣು ಜೈನ್ ಪ್ರಕಾರ, ಎರಡೂ ಕಕ್ಷಿದಾರರಿಗೆ ಹಾರ್ಡ್ ಕಾಪಿಗಳನ್ನು ನೀಡಲಾಗುವುದು. ವರದಿಯನ್ನು ಬಹಿರಂಗಗೊಳಿಸುವಂತೆ ಹಿಂದೂಗಳ ಕಡೆಯವರು ಒತ್ತಾಯಿಸಿದ್ದರು ಎಂದರು.

ಬುಧವಾರದಂದು ಎಎಸ್‌ಐ ಕೂಡ ಇಲ್ಲಿನ ತ್ವರಿತ ನ್ಯಾಯಾಲಯಕ್ಕೆ ಸಮೀಕ್ಷಾ ವರದಿ ಸಲ್ಲಿಸಿತ್ತು. 1991ರಿಂದ ಇಲ್ಲಿ ಜ್ಞಾನವಾಪಿ ಮೂಲ ವಿವಾದ ನಡೆಯುತ್ತಿದೆ. ಡಿಸೆಂಬರ್ 18ರಂದು ಸುಮಾರು ಎರಡು ಸಾವಿರ ಪುಟಗಳ ಈ ವರದಿಯನ್ನು ನಾಲ್ಕು ಭಾಗಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ಎಎಸ್ ಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT