ಸಂಗ್ರಹ ಚಿತ್ರ 
ದೇಶ

ರಾಮಲಲ್ಲಾ ದರ್ಶನಕ್ಕೆ ಜನ ಸಾಗರ: ನಿಯಂತ್ರಿಸಲಾಗದೆ ಕೈಚೆಲ್ಲಿದ ಪೊಲೀಸರು; ಅಯೋಧ್ಯೆಗೆ ಸದ್ಯಕ್ಕೆ ಬರದಂತೆ ಮನವಿ

ಸೋಮವಾರ ಪ್ರಾಣಪ್ರತಿಷ್ಠಾಪಿತನಾದ ಅಯೋಧ್ಯೆ ಶ್ರೀರಾಮನ ವಿಗ್ರಹವನ್ನು ಮಂಗಳವಾರ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದ್ದು, ಮೊದಲ ದಿನೇ ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು.

ಅಯೋಧ್ಯೆ: ಸೋಮವಾರ ಪ್ರಾಣಪ್ರತಿಷ್ಠಾಪಿತನಾದ ಅಯೋಧ್ಯೆ ಶ್ರೀರಾಮನ ವಿಗ್ರಹವನ್ನು ಮಂಗಳವಾರ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದ್ದು, ಮೊದಲ ದಿನೇ ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು.

ಇದೇ ವೇಳೆ ಜನಸಂದಣಿ ನಿಯಂತ್ರಿಲಾಗದೆ ಉತ್ತರಪ್ರದೇಶ ಪೊಲೀಸರು ಸುಸ್ತಾಗಿ ಹೋಗಿದ್ದು, ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಭಕ್ತರ ಸಂದಣಿ ನಿಯಂತ್ರಿಸಲು ರಾಮಮಂದಿರಕ್ಕೆಂದೇ ಒಬ್ಬ ಐಎಎಸ್ ದರ್ಜೆಯ ಮ್ಯಾಜಿಸ್ಟ್ರೇಟರನ್ನೂ ನೇಮಿಸಲಾಗಿದೆ. ಮೊದಲ ದಿನ ಮಧ್ಯಾಹ್ನದ ವೇಳೆ ಸುಮಾರು 2.5 ರಿಂದ 3 ಲಕ್ಷ ಜನರು ದರ್ಶನ ಮಾಡಿದ್ದು, ರಾತ್ರಿ ವೇಳೆ ಅಂದಾಜು 5 ಲಕ್ಷ ಜನರು ಮೊದಲ ದಿನ ರಾಮನ ದರ್ಶನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಕೆಲವು ಸಂಚಾರ ಮಾರ್ಗಗಳಲ್ಲಿ ಬದಲಾವಣೆ ತಂದಿದ್ದಾರೆ.

ಲಖನೌನಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಬಾರಾಬಂಕಿಯಿಂದ ಅಯೋಧ್ಯೆ ಕಡೆಗಿನ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಈ ಮಧ್ಯೆ, ''ಮೊದಲ ದಿನವೇ ರಾಮಲಲ್ಲಾನ ದರ್ಶನ ಪಡೆಯಬೇಕು ಎಂಬ ಆತುರಬೇಡ. ಮಂದಿರದ ಆವರಣದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸರತಿ ಸಾಲಿಗೆ ಅಡ್ಡಿಪಡಿಸಬೇಡಿ. ಸಾಧ್ಯವಾದಷ್ಟು ದಿನ ಅಯೋಧ್ಯೆ ಭೇಟಿ ಮುಂದೂಡಿ,'' ಎಂದು ಉ.ಪ್ರದೇಶ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT