ಮಮತಾ ಬ್ಯಾನರ್ಜಿ 
ದೇಶ

ಕೋಲ್ಕತ್ತಾಗೆ ತೆರಳುತ್ತಿದ್ದಾಗ ಕಾರು ಅಪಘಾತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಕೊಲ್ಕೊತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ.

ಕೆಟ್ಟ ಹವಾಮಾನದ ಕಾರಣ  ಮಮತಾ ಹೆಲಿಕಾಪ್ಟರ್ ಟೇಕ್ ಆಫ್ ಆಗದ ನಂತರ ಅವರು ಕಾರಿನಲ್ಲಿ ಹಿಂತಿರುಗಬೇಕಾಯಿತು. ಕೋಲ್ಕತ್ತಾದಲ್ಲಿ ವೈದ್ಯರು ಆಕೆಗೆ ಚಿಕಿತ್ಸೆ ನೀಡಲಿದ್ದಾರೆ. ಚಾಲಕನ ಪಕ್ಕದಲ್ಲಿ ಮುಂಭಾಗದಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ತಲೆ ವಿಂಡ್‌ಸ್ಕ್ರೀನ್‌ಗೆ ಬಡಿದ ನಂತರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಆಡಳಿತಾತ್ಮಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲು ಮುಖ್ಯಮಂತ್ರಿ ಕೋಲ್ಕತ್ತಾದಿಂದ 102 ಕಿಮೀ ದೂರದಲ್ಲಿರುವ ಪುರ್ಬಾ ಬರ್ಧಮಾನ್‌ ಗೆ ತೆರಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT