ಗಣರಾಜ್ಯೋತ್ಸವದ ಝಲಕ್ 
ದೇಶ

ನವದೆಹಲಿ: ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಪಂಚಾಯಿತಿ ಪ್ರತಿನಿಧಿಗಳಿಗೆ ಆಹ್ವಾನ!

ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ. 

ದೇಶಾದ್ಯಂತ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅವರ ಸಂಗಾತಿಗಳು ಸೇರಿದಂತೆ ಸುಮಾರು 500 ಅತಿಥಿಗಳನ್ನು ಕರ್ತವ್ಯ ಪಥದಲ್ಲಿ ಪರೇಡ್ ವೀಕ್ಷಿಸಲು ಆಹ್ವಾನಿಸಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಹಿಂದಿನ ವರ್ಷಗಳಲ್ಲಿ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪಡೆದಿರುವವರು  ಅಥವಾ ಪಂಚಾಯತಿಗಳಲ್ಲಿ ಗಮನಾರ್ಹ ರೀತಿಯಲ್ಲಿ ಕೆಲಸ ಮಾಡಿದ್ದವರನ್ನು ಆಯ್ಕೆ ಮಾಡಲಾಗಿದೆ. 

ಜನರ ಸಹಭಾಗಿತ್ವ ಯೋಜನೆಗೆ ಅನುಗುಣವಾಗಿ ಪಂಚಾಯಿತಿ ಪ್ರತಿನಿಧಿಗಳಿಗೆ ರಾಷ್ಟ್ರೀಯ ಹಬ್ಬದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಈ ಕ್ರಮದ ಮೂಲಕ ಪಂಚಾಯತ್ ಪ್ರತಿನಿಧಿಗಳನ್ನು ಗುರುತಿಸುವ ಮತ್ತು ಒಳಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ನೀತಿಯನ್ನು ಬಲಪಡಿಸುವ ಮೂಲಕ ಮಹತ್ವವನ್ನು ಹೊಂದಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ಆಹ್ವಾನಿತರು ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನವನ್ನು ವೀಕ್ಷಿಸಲಿದ್ದು, ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಅವರ ನಿವಾಸದಲ್ಲಿ ಭೇಟಿಯಾಗಲಿದ್ದಾರೆ. ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸಹ ಈ ವೇಳೆ ಉಪಸ್ಥಿತರಿರುವರು ಎಂದು ಪಂಚಾಯತ್ ರಾಜ್ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT