ಗಣರಾಜ್ಯೋತ್ಸವದ ಝಲಕ್ 
ದೇಶ

ನವದೆಹಲಿ: ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಪಂಚಾಯಿತಿ ಪ್ರತಿನಿಧಿಗಳಿಗೆ ಆಹ್ವಾನ!

ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ. 

ದೇಶಾದ್ಯಂತ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅವರ ಸಂಗಾತಿಗಳು ಸೇರಿದಂತೆ ಸುಮಾರು 500 ಅತಿಥಿಗಳನ್ನು ಕರ್ತವ್ಯ ಪಥದಲ್ಲಿ ಪರೇಡ್ ವೀಕ್ಷಿಸಲು ಆಹ್ವಾನಿಸಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಹಿಂದಿನ ವರ್ಷಗಳಲ್ಲಿ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪಡೆದಿರುವವರು  ಅಥವಾ ಪಂಚಾಯತಿಗಳಲ್ಲಿ ಗಮನಾರ್ಹ ರೀತಿಯಲ್ಲಿ ಕೆಲಸ ಮಾಡಿದ್ದವರನ್ನು ಆಯ್ಕೆ ಮಾಡಲಾಗಿದೆ. 

ಜನರ ಸಹಭಾಗಿತ್ವ ಯೋಜನೆಗೆ ಅನುಗುಣವಾಗಿ ಪಂಚಾಯಿತಿ ಪ್ರತಿನಿಧಿಗಳಿಗೆ ರಾಷ್ಟ್ರೀಯ ಹಬ್ಬದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಈ ಕ್ರಮದ ಮೂಲಕ ಪಂಚಾಯತ್ ಪ್ರತಿನಿಧಿಗಳನ್ನು ಗುರುತಿಸುವ ಮತ್ತು ಒಳಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ನೀತಿಯನ್ನು ಬಲಪಡಿಸುವ ಮೂಲಕ ಮಹತ್ವವನ್ನು ಹೊಂದಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ಆಹ್ವಾನಿತರು ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನವನ್ನು ವೀಕ್ಷಿಸಲಿದ್ದು, ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಅವರ ನಿವಾಸದಲ್ಲಿ ಭೇಟಿಯಾಗಲಿದ್ದಾರೆ. ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸಹ ಈ ವೇಳೆ ಉಪಸ್ಥಿತರಿರುವರು ಎಂದು ಪಂಚಾಯತ್ ರಾಜ್ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ