ಬಿಹಾರ ಸಿಎಂ ನಿತೀಶ್‌ ಕುಮಾರ್ 
ದೇಶ

ಬಿಹಾರದಲ್ಲೂ ಮಹಾಮೈತ್ರಿಗೆ ಕುತ್ತು?: ನಿತೀಶ್ ಕುಮಾರ್  ಬಿಜೆಪಿ ಪಾಳಯ ಸೇರುವ ಸಾಧ್ಯತೆ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿಪಕ್ಷಗಳ INDIಮೈತ್ರಿಕೂಟ ದುರ್ಬಲವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿದೆ.

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿಪಕ್ಷಗಳ INDIಮೈತ್ರಿಕೂಟ ದುರ್ಬಲವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿದೆ.

ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲಿ , ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಬಳಿಕ ಈಗ ಬಿಹಾರದಲ್ಲಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರದ ಜನಪ್ರಿಯ ನಾಯಕ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್ ಅವರಿಗೆ ಎನ್ ಡಿಎ ಸರ್ಕಾರ ಭಾರತ ರತ್ನ ನೀಡಿದ ಬೆನ್ನಲ್ಲೇ ನಿತೀಶ್ ಕುಮಾರ್ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿ ಹೊಗಳಿದ್ದರು. ಈ ಬೆನ್ನಲ್ಲೇ ನಿತೀಶ್ ಕುಮಾರ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

2013 ರಿಂದ ನಿತೀಶ್ ಕುಮಾರ್ ಆಗಾಗ್ಗೆ ಮೈತ್ರಿಕೂಟವನ್ನು ಬದಲಾವಣೆ ಮಾಡುತ್ತಿದ್ದಾರೆ. 2022 ರಲ್ಲಿ ಎನ್ ಡಿಎಯಿಂದ ಹೊರಬಂದಿದ್ದ ನಿತೀಶ್ ಕುಮಾರ್ ಮಹಾಮೈತ್ರಿಕೂಟ ಸೇರ್ಪಡೆಗೊಂಡಿದ್ದರು.
 
ಕಳೆದ ಕೆಲವು ವಾರಗಳಲ್ಲಿ ನಿತೀಶ್ ಕುಮಾರ್ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದು ಗಮನಾರ್ಹವಾಗಿದೆ. ಇನ್ನು INDI ಮೈತ್ರಿಕೂಟದಲ್ಲಿನ ಸ್ಪಷ್ಟತೆಯ ಕೊರತೆಯ ಬಗ್ಗೆ ಮತ್ತು ಸಂಭಾವ್ಯ ಪಿಎಂ ಅಭ್ಯರ್ಥಿ ವಿಷಯವಾಗಿ ತಮ್ಮನ್ನು ಕಡೆಗಣಿಸಿರುವುದರ ಬಗ್ಗೆಯೂ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT