ಬಿಹಾರ ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ: ಮಹಾಮೈತ್ರಿಗೆ ನಿತೀಶ್ ವಿದಾಯ: ಜ.28ಕ್ಕೆ ಬಿಜೆಪಿ ಬೆಂಬಲದೊಂದಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬಿಹಾರ ರಾಜಕೀಯದಲ್ಲಾದ ದಿಢೀರ್ ಬೆಳವಣಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಂಗ್ರೆಸ್ -ಆರ್ ಜೆಡಿಎಸ್ ಜೊತೆಗಿನ ಮಹಾಮೈತ್ರಿ ಕೂಟ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಸೇರುವುದು ಬಹುತೇಕ ಖಚಿತವಾಗಿದೆ.

ಪಾಟ್ನಾ: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬಿಹಾರ ರಾಜಕೀಯದಲ್ಲಾದ ದಿಢೀರ್ ಬೆಳವಣಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಂಗ್ರೆಸ್ -ಆರ್ ಜೆಡಿಎಸ್ ಜೊತೆಗಿನ ಮಹಾಮೈತ್ರಿ ಕೂಟ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಸೇರುವುದು ಬಹುತೇಕ ಖಚಿತವಾಗಿದೆ.

ಜನವರಿ 28 ರಂದು ಬಿಜೆಪಿ ಬೆಂಬಲದೊಂದಿಗೆ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.2024 ರ ಲೋಕಸಭೆ ಚುನಾವಣೆಗೆ ಮುನ್ನ ನಿತೀಶ್ ಕುಮಾರ್ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಲಿದ್ದಾರೆ ಎಂಬುದು ಖಚಿತವಾಗಿದೆ ಎಂದು ಜೆಡಿ-ಯು ನಾಯಕರೊಬ್ಬರು ಹೇಳಿದ್ದಾರೆ.

 ಈ ಮಧ್ಯೆ  ಜೆಡಿಯು ತನ್ನ ಎಲ್ಲಾ ನಿಗದಿತ ಕಾರ್ಯಕ್ರಮವನ್ನು ಈ ತಿಂಗಳ ಅಂತ್ಯದವರೆಗೆ ರದ್ದುಗೊಳಿಸಿದೆ. ಪಕ್ಷದ ಎಲ್ಲಾ ಶಾಸಕರು ಶುಕ್ರವಾರ ರಾತ್ರಿಯೊಳಗೆ ಪಾಟ್ನಾಕ್ಕೆ ಬರುವಂತೆ ಸೂಚಿಸಲಾಗಿದೆ. ಈ ಮೂಲಕ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ರಚಿಸಲಾಗಿದ್ದ ಇಂಡಿಯಾ ಮೈತ್ರಿಕೂಟ ವಿಧ್ರಗೊಳುವ ಸಾಧ್ಯತೆ ಹೆಚ್ಚಾಗಿದೆ. 

2022 ರಲ್ಲಿ ಎನ್ ಡಿಎಯಿಂದ ಹೊರಬಂದಿದ್ದ ನಿತೀಶ್ ಕುಮಾರ್ ಮಹಾಮೈತ್ರಿಕೂಟ ಸೇರ್ಪಡೆಗೊಂಡಿದ್ದರು. ಇವರಿಗೆ ಕಾಂಗ್ರೆಸ್-ಆರ್ ಜೆಡಿ ಹಾಗೂ ಇತರ ಕಮ್ಯೂನಿಸ್ಟ್ ಪಕ್ಷಗಳು ಸಹಕಾರ ನೀಡಿದ್ದವು. ಆದರೆ, ಕಳೆದ ಕೆಲವು ವಾರಗಳಲ್ಲಿ ನಿತೀಶ್ ಕುಮಾರ್ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ಅವರನ್ನು ಹೊಗಳಲು ಶುರು ಮಾಡಿದ್ದರು. ಇಂಡಿಯಾ ಮೈತ್ರಿಕೂಟದಲ್ಲಿನ ಸ್ಪಷ್ಟತೆಯ ಕೊರತೆ ಮತ್ತು ಸಂಭಾವ್ಯ ಪ್ರಧಾನಿ ಅಭ್ಯರ್ಥಿ ವಿಷಯವಾಗಿ ತಮ್ಮನ್ನು ಕಡೆಗಣಿಸಿರುವುದರ ಬಗ್ಗೆಯೂ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿತೀಶ್ ಅವರು ಭಾನುವಾರ ದಾಖಲೆಯ ಏಳನೇ ಬಾರಿ ಬಿಹಾರ ಸಿಎಂ ಆಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಜೆಡಿಯು ಪಕ್ಷಕ್ಕೆ ಬೆಂಬಲ ನೀಡಲಿರುವ ಬಿಜೆಪಿಗೆ ಎರಡು ಉಪ ಮುಖ್ಯಮಂತ್ರಿ ಸ್ಥಾನ ದೊರಕಲಿದೆ. 2020ರ ಬಿಹಾರ ವಿಧಾನಸಭೆ ಚುನಾವಣೆಗೂ ಮುಂಚೆ ಇದ್ದ ಮೈತ್ರಿ ಸರ್ಕಾರದಂತೆ ಸಂಪುಟ ಸಚಿವ ಸ್ಥಾನಗಳ ಹಂಚಿಕೆ ನಡೆಯುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT