ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಬಿಹಾರ ರಾಜಕಾರಣ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್!

ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪಾಟ್ನಾ: ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಇಂದು ಬೆಳಗ್ಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ನಿತೀಶ್ ಕುಮಾರ್ ಅಥವಾ ಜೆಡಿಯುನಿಂದ ಯಾವುದೇ ಅಧಿಕೃತ ಹೇಳಿಕೆ ಇಲ್ಲಿಯವರೆಗೂ ಹೊರಬಿದ್ದಿಲ್ಲ.

Bihar Chief Minister Nitish Kumar has sought time to meet the Governor today morning: Sources

— ANI (@ANI) January 28, 2024

ನಿತೀಶ್ ಕುಮಾರ್ ಅವರ ನಿರ್ಣಯದ ನಂತರವೇ ತಮ್ಮ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ತಿಳಿಸಿದ್ದಾರೆ. ಬಿಜೆಪಿ ಕೋರ್ ಕಮಿಟಿ  ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚೌಧರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಇಲ್ಲಿಯವರೆಗೆ ರಾಜೀನಾಮೆ ನೀಡಿಲ್ಲ, ಮಹಾಮೈತ್ರಿಕೂಟ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಯಾರು ಹಿಂಪಡೆದಿಲ್ಲ, ಅಂತಹುದು ಏನಾದರೂ ನಡೆದರೆ ಮಾತ್ರ ಬಿಜೆಪಿ ಮುಂದಿನ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದರು. 

ಕೇವಲ ಕಣ್ಣಿಗೆ ಕಾಣುವ ವಿಷಯದ ಮೇಲೆ ರಾಜಕೀಯ ಮಾಡಲಾಗುವುದಿಲ್ಲ, ಯಾರಾದರೂ ನೀಡುವ ಸಂದೇಶ ಆಧರಿಸಿ ರಾಜಕೀಯ ಮಾಡಲಾಗುತ್ತದೆ. ಪ್ರಧಾನಿ ಮೋದಿ ಅವರಲ್ಲಿ ನಮಗೆ ಸಂಪೂರ್ಣ ನಂಬಿಕೆಯಿದೆ. ಅವರಿಗೆ ಏನಾದರೂ ಸಂದೇಶ ಬಂದರೆ ನಮಗೆ ತಿಳಿಯುತ್ತದೆ ಅದರಂತೆ ನಡೆದುಕೊಳ್ಳುತೇವೆ ಎಂದರು.  ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!