ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಬಿಹಾರ ರಾಜಕಾರಣ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್!

ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪಾಟ್ನಾ: ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಇಂದು ಬೆಳಗ್ಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ನಿತೀಶ್ ಕುಮಾರ್ ಅಥವಾ ಜೆಡಿಯುನಿಂದ ಯಾವುದೇ ಅಧಿಕೃತ ಹೇಳಿಕೆ ಇಲ್ಲಿಯವರೆಗೂ ಹೊರಬಿದ್ದಿಲ್ಲ.

Bihar Chief Minister Nitish Kumar has sought time to meet the Governor today morning: Sources

— ANI (@ANI) January 28, 2024

ನಿತೀಶ್ ಕುಮಾರ್ ಅವರ ನಿರ್ಣಯದ ನಂತರವೇ ತಮ್ಮ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ತಿಳಿಸಿದ್ದಾರೆ. ಬಿಜೆಪಿ ಕೋರ್ ಕಮಿಟಿ  ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚೌಧರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಇಲ್ಲಿಯವರೆಗೆ ರಾಜೀನಾಮೆ ನೀಡಿಲ್ಲ, ಮಹಾಮೈತ್ರಿಕೂಟ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಯಾರು ಹಿಂಪಡೆದಿಲ್ಲ, ಅಂತಹುದು ಏನಾದರೂ ನಡೆದರೆ ಮಾತ್ರ ಬಿಜೆಪಿ ಮುಂದಿನ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದರು. 

ಕೇವಲ ಕಣ್ಣಿಗೆ ಕಾಣುವ ವಿಷಯದ ಮೇಲೆ ರಾಜಕೀಯ ಮಾಡಲಾಗುವುದಿಲ್ಲ, ಯಾರಾದರೂ ನೀಡುವ ಸಂದೇಶ ಆಧರಿಸಿ ರಾಜಕೀಯ ಮಾಡಲಾಗುತ್ತದೆ. ಪ್ರಧಾನಿ ಮೋದಿ ಅವರಲ್ಲಿ ನಮಗೆ ಸಂಪೂರ್ಣ ನಂಬಿಕೆಯಿದೆ. ಅವರಿಗೆ ಏನಾದರೂ ಸಂದೇಶ ಬಂದರೆ ನಮಗೆ ತಿಳಿಯುತ್ತದೆ ಅದರಂತೆ ನಡೆದುಕೊಳ್ಳುತೇವೆ ಎಂದರು.  ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT