ಅಪಘಾತದ ಚಿತ್ರ 
ದೇಶ

ತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ- ಭೀಕರ ಅಪಘಾತದ ವಿಡಿಯೋ

ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಚೆನ್ನೈ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಪುಲಿಯಂಗುಡಿದ  ಐವರು ನಿವಾಸಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಚೊಕ್ಕಂಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರೆಲ್ಲರೂ  ಪುಲಿಯಂಗುಡಿಯ ಭಗವತಿ ಅಮ್ಮನ್ ದೇವಾಲಯ ಪ್ರದೇಶದವರಾಗಿದ್ದು, ಜನವರಿ 27 ರಂದು ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದರು ಎನ್ನಲಾಗಿದೆ.

ಉತ್ಸವದಲ್ಲಿ ಪಾಲ್ಗೊಂಡ ನಂತರ ಕುಟ್ರಾಲಂ ಜಲಪಾತ ವೀಕ್ಷಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ನಿದ್ರೆಯ ಮಂಪರಿನಲ್ಲಿದ್ದ ಕಾರು ಚಾಲಕ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿಯಡಿ ಸಿಲುಕಿದ ಕಾರು ಕೆಲ ಅಡಿಗಳವರೆಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT