ಸಾಂದರ್ಭಿಕ ಚಿತ್ರ 
ದೇಶ

ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 64 ಕೆಜಿ ಗಾಂಜಾದೊಂದಿಗೆ ಮೂವರ ಬಂಧನ

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಚೌಟುಪ್ಪಲ್ ಪೊಲೀಸರೊಂದಿಗೆ ಮಲ್ಕಾಜ್‌ಗಿರಿ ವಿಶೇಷ ಕಾರ್ಯಾಚರಣೆ ತಂಡ ಭೇದಿಸಿದ್ದು, ಮೂವರನ್ನು ಬಂಧಿಸಿದ್ದು, ಅವರಿಂದ 64 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಹೈದರಾಬಾದ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಚೌಟುಪ್ಪಲ್ ಪೊಲೀಸರೊಂದಿಗೆ ಮಲ್ಕಾಜ್‌ಗಿರಿ ವಿಶೇಷ ಕಾರ್ಯಾಚರಣೆ ತಂಡ ಭೇದಿಸಿದ್ದು, ಮೂವರನ್ನು ಬಂಧಿಸಿದ್ದು, ಅವರಿಂದ 64 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಫಯಾಸ್ (29) ಅನಂತ ಮೋಹನ್ (25) ಸೈಯದ್ (39) ಬಂಧಿತ ಆರೋಪಿಗಳು. ಇವರೆಲ್ಲರೂ ಕೇರಳದ ವಿವಿಧ ಜಿಲ್ಲೆಗಳಿಂದ ಬಂದವರಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರು ಮೂಲದ ಪೆಡ್ಲರ್‌ನ ಸಂಪರ್ಕಕ್ಕೆ ಬಂದು ಉಳಿದವರನ್ನು ಪರಿಚಯಿಸಿದರು ಎನ್ನಲಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕುವಿನಿಂದ ಬೆಂಗಳೂರಿಗೆ ಗಾಂಜಾ ಸಾಗಿಸುವ ವೇಳೆ ಬೆಂಗಳೂರಿನ ಪೆಡ್ಲರ್ ಮೂವರು ಸಾಗಣೆದಾರರಿಗೆ ಭಾರಿ ಹಣ ನೀಡುವುದಾಗಿ ಭರವಸೆ ನೀಡಿದ್ದರು. ಇದಕ್ಕಾಗಿ ಯೋಜನೆ ರೂಪಿಸಿ, ಡ್ರಗ್ಸ್ ಇರುವ ಕಾರನ್ನು ಸೈಯದ್ ಚಾಲನೆ ಮಾಡಲು ಮತ್ತು ಫಯಾಸ್, ಮೋಹನ್ ಎರಡನೇ ಕಾರಿನಲ್ಲಿ ತೆರಳಲು ಸೂಚನೆ ನೀಡಲಾಗಿತ್ತು.

ಅದರಂತೆ  ಮೂವರು ಆರೋಪಿಗಳು ಜನವರಿ 24ರಂದು ಅರಕುವಿಗೆ ತೆರಳಿ ಗಾಂಜಾ ತುಂಬಿಕೊಂಡು, ಹೈದರಾಬಾದ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದಾಗ ಮಲ್ಕಾಜ್‌ಗಿರಿ ಎಸ್‌ಒಟಿ ಮತ್ತು ಚೌಟುಪ್ಪಲ್ ಪೊಲೀಸರು ಅವರ ವಾಹನಗಳನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಆರೋಪಿಗಳನ್ನು  ಬಂಧಿಸಿ, ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT