ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ನಾನು ರಾಮಾಯಣ, ಕುರಾನ್, ಬೈಬಲ್ ಅನ್ನು ಅನುಸರಿಸುತ್ತೇನೆ, ಆದರೆ...: ಮಮತಾ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳ ನಿಮ್ಮ ಮನೆಗಳಿಗೆ ಕಳುಹಿಸುವುದಾಗಿ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

ಕೂಚ್ ಬೆಹಾರ್‌: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳ ನಿಮ್ಮ ಮನೆಗಳಿಗೆ ಕಳುಹಿಸುವುದಾಗಿ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಆರೋಪಿಸಿದ್ದಾರೆ.

ಪೌರತ್ವ(ತಿದ್ದುಪಡಿ) ಕಾಯಿದೆ ಅಥವಾ ಸಿಎಎಯಿಂದ "ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು" ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಟಿಎಂಸಿ ಮುಖ್ಯಸ್ಥೆ ಕೂಚ್ ಬೆಹಾರ್‌ನ ಸ್ಥಳೀಯರಿಗೆ, ವಿಶೇಷವಾಗಿ ರಾಜ್‌ಬನ್‌ಶಿಗಳಿಗೆ ಕರೆ ನೀಡಿದ್ದಾರೆ.

"ಬಿಜೆಪಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಚುನಾವಣೆ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ... ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಜಾರಿ ನಿರ್ದೇಶನಾಲಯ(ಇಡಿ) ಮತ್ತು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯನ್ನು ನಿಮ್ಮ ಮನೆಗೆ ಕಳುಹಿಸುವುದಾಗಿ ಫೋನ್ ಮೂಲಕ ಜನರಿಗೆ ಬೆದರಿಕೆ ಹಾಕುತ್ತಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಯಾವುದೇ ನಿರ್ದಿಷ್ಟ ದೇವರನ್ನು ಪೂಜಿಸಲು ಬಿಜೆಪಿಯ ಅನುಮತಿ ಬೇಕಿಲ್ಲ ಎಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ನಾನು ರಾಮಾಯಣ, ಕುರಾನ್, ಬೈಬಲ್ ಮತ್ತು ಗುರು ಗ್ರಂಥ ಸಾಹಿಬ್ ಅನ್ನು ಅನುಸರಿಸುತ್ತೇನೆ... ನಾನು ಬಡವರ ಮನೆಗೆ ಭೇಟಿ, ಅಲ್ಲಿ ಹೊರಗಿನಿಂದ ತಂದ ಆಹಾರವನ್ನು ತಿನ್ನುವಂತಹ ನಾಟಕ ಮಾಡುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಮತ್ತೆ ಸಿಎಎ ವಿಷಯವನ್ನು ಪ್ರಸ್ತಾಪಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಇದಕ್ಕು ಮುನ್ನ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಅವರು ಮುಂದಿನ ಏಳು ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮತಕ್ಕಾಗಿ ಕೇಸರಿ ಪಕ್ಷ ಮತ್ತೆ "ಸಿಎಎ" ಪ್ರಸ್ತಾಪಿಸಲು ಪ್ರಾರಂಭಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT