ನಿತೀಶ್ ಕುಮಾರ್ 
ದೇಶ

ಬಿಹಾರ ರಾಜಕೀಯ ಸಂಘರ್ಷ: ಫೆಬ್ರವರಿ 10ರಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ!

ಮಹಾ ಘಟ್ ಬಂಧನ್ ಮೈತ್ರಿಕೂಟ ತೊರೆದು ಎನ್ ಡಿಎ ತೆಕ್ಕೆಗೆ ಜಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಫೆಬ್ರವರಿ 10ರಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಪಾಟ್ನಾ: ಮಹಾ ಘಟ್ ಬಂಧನ್ ಮೈತ್ರಿಕೂಟ ತೊರೆದು ಎನ್ ಡಿಎ ತೆಕ್ಕೆಗೆ ಜಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಫೆಬ್ರವರಿ 10ರಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಮಂಗಳವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಹೊಸ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರವು ಫೆಬ್ರವರಿ 10 ರಂದು ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಕೇಳಲಿದೆ.

ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಬಿಹಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸಾಂಪ್ರದಾಯಿಕ ಭಾಷಣ ಮಾಡಿದ ನಂತರ ಬಜೆಟ್ ಅಧಿವೇಶನದ ಮೊದಲ ದಿನದಂದು ಸರ್ಕಾರ ವಿಶ್ವಾಸ ಮತವನ್ನು ಕೇಳಲಿದೆ. ಈ ವಿಶೇಷ ಅಧಿವೇಶನವು ಒಟ್ಟು 12 ಕೆಲಸದ ದಿನಗಳನ್ನು ಹೊಂದಿದ್ದು, ಫೆಬ್ರವರಿ 12 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಜನತಾ ದಳ-ಯುನೈಟೆಡ್‌ (ಜೆಡಿಯು)ನ ಅಧ್ಯಕ್ಷ ನಿತೀಶ್ ಕುಮಾರ್, ಬಿಹಾರದಲ್ಲಿ ನಡೆದ ನಾಟಕೀಯ ರಾಜಕೀಯ ಬೆಳವಣಿಗೆ ಬಳಿಕ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯೊಂದಿಗೆ ಹೊಸ ಸರ್ಕಾರವನ್ನು ರಚಿಸಿದ್ದರು. ಆ ಮೂಲಕ ದಾಖಲೆಯ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೆ 18 ತಿಂಗಳ ಹಿಂದಿನ ಮಹಾಘಟ್ ಬಂಧನ್ ಸರ್ಕಾರಕ್ಕೆ ಎಳ್ಳು ನೀರು ಬಿಟ್ಟಿದ್ದರು.

ಸ್ಪೀಕರ್ ಬದಲಾವಣೆಗೆ ಬಿಜೆಪಿ ಪಟ್ಟು
ಇನ್ನು ಈ ಹಿಂದೆ ಮಹಾಘಟ್ ಬಂಧನ್ ಸರ್ಕಾರ ರಚನೆಯಾದಾಗ ಆರ್ ಜೆಡಿ (ರಾಷ್ಟ್ರೀಯ ಜನತಾ ದಳ) ಶಾಸಕ ಅವಧ್ ಬಿಹಾರಿ ಚೌಧರಿ ಸ್ಪೀಕರ್ ಆಗಿ ನೇಮಕವಾಗಿದ್ದರು. ಆದರೆ ಇದೀಗ ಅವರ ವಿರುದ್ಧ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಒತ್ತಡದ ನಡುವೆಯೂ ಸ್ಪೀಕರ್ ಸ್ಥಾನದಿಂದ ಕೆಳಗಿಳಿಯದಿರುವ ಹಿನ್ನೆಲೆಯಲ್ಲಿ ಇದು ಬಿರುಸಿನ ಅಧಿವೇಶನವಾಗಲಿದೆ ಎಂದು ನಿರೀಕ್ಷಿಸಲಾಗಿದೆ. 

ಮೂಲಗಳ ಪ್ರಕಾರ ವಿಧಾನಸಭಾ ಸ್ಪೀಕರ್ ಹುದ್ದೆಯನ್ನು ಬಿಜೆಪಿಯೇ ಉಳಿಸಿಕೊಳ್ಳಲಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT