ಬಿಹಾರ ಸಿಎಂ ನಿತೀಶ್ ಕುಮಾರ್ 
ದೇಶ

INDIA ಕೂಟಕ್ಕೆ ಬೇರೆ ಹೆಸರು ಕೊಡಿ ಎಂದಿದ್ದೆ; ಜಾತಿ ಗಣತಿ ಕ್ರೆಡಿಟ್ ಪಡೆಯಲು ರಾಹುಲ್ ಗಾಂಧಿ ನೋಡುತ್ತಿದ್ದಾರೆ: ನಿತೀಶ್ ಕುಮಾರ್

ಇಂಡಿಯಾ ಮೈತ್ರಿಕೂಟಕ್ಕೆ ಬೇರೆ ಹೆಸರನ್ನಿಡಲು ನಾನು ಒತ್ತಾಯಿಸಿದ್ದೆ. ಆದರೆ ಅವರು ಆಗಲೇ ಹೆಸರನ್ನು ಅಂತಿಮಗೊಳಿಸಿದ್ದರು. ಹೆಸರು ಬದಲಾಯಿಸಲು ನಾನು ಬಹಳ ಪ್ರಯತ್ನಪಟ್ಟೆ. ಅವರು ಏನೂ ಕೆಲಸ ಮಾಡಿಲ್ಲ, ಇವತ್ತಿನವರೆಗೆ ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂದು ಅವರು ತೀರ್ಮಾನಿಸಿಲ್ಲ.

ಪಾಟ್ನಾ: ಇಂಡಿಯಾ ಮೈತ್ರಿಕೂಟಕ್ಕೆ ಬೇರೆ ಹೆಸರನ್ನಿಡಲು ನಾನು ಒತ್ತಾಯಿಸಿದ್ದೆ. ಆದರೆ ಅವರು ಆಗಲೇ ಹೆಸರನ್ನು ಅಂತಿಮಗೊಳಿಸಿದ್ದರು. ಹೆಸರು ಬದಲಾಯಿಸಲು ನಾನು ಬಹಳ ಪ್ರಯತ್ನಪಟ್ಟೆ. ಅವರು ಏನೂ ಕೆಲಸ ಮಾಡಿಲ್ಲ, ಇವತ್ತಿನವರೆಗೆ ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂದು ಅವರು ತೀರ್ಮಾನಿಸಿಲ್ಲ. ಹೀಗಾಗಿ ನಾನು ಆ ಮೈತ್ರಿಕೂಟದಿಂದ ಹೊರಬಂದು ಆರಂಭದಲ್ಲಿ ನನ್ನ ಜೊತೆಗಿದ್ದವರ ಒಟ್ಟಿಗೆ ಸೇರಿಕೊಂಡೆ. ನಾನು ಬಿಹಾರ ಜನತೆ ಪರವಾಗಿ ಕೆಲಸ ಮುಂದುವರಿಸುತ್ತೇನೆ ಎಂದು ಇಂಡಿಯಾ ಮೈತ್ರಿಕೂಟದಿಂದ ಹೊರಬಂದು ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಇಂದು ಪಾಟ್ನಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಹಾರದಲ್ಲಿ ಜಾತಿ ಗಣತಿಯ ಕ್ರೆಡಿಟ್ ನ್ನು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಜಾತಿ ಗಣತಿ ಯಾವಾಗ ನಡೆಯಿತು ಎಂದು ಅವರು ಮರೆತಿದ್ದಾರೆಯೇ, ನಾನು ಅದನ್ನು 9 ಪಕ್ಷಗಳ ಸಮ್ಮುಖದಲ್ಲಿ ನಡೆಸಿದ್ದೇನೆ. 2019-2020 ರಲ್ಲಿ, ನಾನು ಅಸೆಂಬ್ಲಿಯಿಂದ ಹಿಡಿದು ಸಾರ್ವಜನಿಕ ಸಭೆಗಳವರೆಗೆ ಎಲ್ಲೆಂದರಲ್ಲಿ ಜಾತಿ ಗಣತಿ ನಡೆಸುವ ಬಗ್ಗೆ ಮಾತನಾಡುತ್ತಿದ್ದೆ. ಈಗ ಅದರ ಸುಳ್ಳು ಕ್ರೆಡಿಟ್ ನ್ನು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ನಾನು ಏನು ಮಾಡಬೇಕು, ಅವರು ಏನು ಬೇಕಾದರೂ ಹೇಳಿಕೊಳ್ಳಲಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT