ರಾಹುಲ್ ಗಾಂಧಿ online desk
ದೇಶ

ಹಿಂದೂಗಳಿಗೆ ಅವಮಾನ: ರಾಹುಲ್ ಗಾಂಧಿ ಭಾಷಣದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಪೀಕರ್ ಗೆ ಬಿಜೆಪಿ ಮನವಿ

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹಿಂದೂಗಳನ್ನು ಹಿಂಸೆ ಮತ್ತು ಸುಳ್ಳು ಹೇಳುವುದಕ್ಕೆ ಹೋಲಿಕೆ ಮಾಡಿ, ಹಿಂದೂ ಸಮಾಜಕ್ಕೆ ಅವಮಾನವೆಸಗಿದ್ದಾರೆ ಎಂದು ಇಬ್ಬರೂ ಕೇಂದ್ರ ಸಚಿವರು ಆರೋಪಿಸಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ ಮೂಲಕ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನಕ್ಕೆ ಕಳಂಕ ತಂದಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕಿರಣ್ ರಿಜಿಜು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹಿಂದೂಗಳನ್ನು ಹಿಂಸೆ ಮತ್ತು ಸುಳ್ಳು ಹೇಳುವುದಕ್ಕೆ ಹೋಲಿಕೆ ಮಾಡಿ, ಹಿಂದೂ ಸಮಾಜಕ್ಕೆ ಅವಮಾನವೆಸಗಿದ್ದಾರೆ ಎಂದು ಇಬ್ಬರೂ ಕೇಂದ್ರ ಸಚಿವರು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಮಾಡಿದ ಹಲವು ವಿಷಯಗಳಿಗೆ (ಪ್ರತಿಪಾದನೆಗಳಿಗೆ) ಬಿಜೆಪಿ ಸವಾಲು ಹಾಕಿದ್ದು, ಈ ವಿಷಯವಾಗಿ ಕ್ರಮ ಕೈಗೊಳ್ಳಲು ಸ್ಪೀಕರ್ ಗೆ ಮನವಿ ಮಾಡಿರುವುದಾಗಿ ಹೇಳಿದೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಗಳಲ್ಲಿ ಉಲ್ಲೇಖಿಸಿದ ಪ್ರತಿಪಾದನೆಗಳನ್ನು ರುಜುವಾತು ಮಾಡಬೇಕು ಅಥವಾ ಕ್ಷಮೆ ಕೋರಬೇಕೆಂದು ಅಶ್ವಿನಿ ವೈಷ್ಣವ್ ಹಾಗೂ ಕಿರಣ್ ರಿಜಿಜು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿನ ಅಭಿವೃದ್ಧಿ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಹಾಗೂ ಅಗ್ನಿ ಪಥ್ ಯೋಜನೆಯ ವಿಷಯವಾಗಿ ರಾಹುಲ್ ಗಾಂಧಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿರುವ ರೈಲ್ವೆ ಸಚಿವ ಕಿರಣ್ ರಿಜಿಜು, ಅಯೋಧ್ಯೆಯಲ್ಲಿ ಸ್ಥಳೀಯ ವ್ಯಾಪಾರಿಗಳು ಹಾಗೂ ಇತರರಿಗೆ 1,253 ಕೋಟಿ ರೂಪಾಯಿ ಮೊತ್ತದ ಪರಿಹಾರ ನೀಡಲಾಗಿದೆ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಮಾತನಾಡಿ, ಮಾಜಿ ಗೃಹ ಸಚಿವರಾದ ಪಿ ಚಿದಂಬರಂ ಮತ್ತು ಸುಶೀಲ್ ಕುಮಾರ್ ಶಿಂಧೆ ಹಿಂದೂ ಧರ್ಮದ ಬಗ್ಗೆ ಭಯೋತ್ಪಾದನೆ ಆರೋಪ ಮಾಡಿದ್ದರು. ಹಿಂದೂಗಳನ್ನು ಅವಮಾನಿಸುವ ಇತಿಹಾಸವನ್ನು ಕಾಂಗ್ರೆಸ್ ಹೊಂದಿದೆ ಎಂದು ತ್ರಿವೇದಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT