ಸಾಂದರ್ಭಿಕ ಚಿತ್ರ 
ದೇಶ

ಜೂನ್‌ ತಿಂಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲು: IMD

IMD ಅಂಕಿಅಂಶಗಳ ಪ್ರಕಾರ ಜೂನ್ ನಲ್ಲಿ ಸಾಮಾನ್ಯವಾಗಿ 165.33 ಮಿ. ಮೀಟರ್ ಮಳೆಯಾಗುತಿತ್ತು. ಆದರೆ, ಈ ಬಾರಿ ಶೇ. 147.2 ಮಿ.ಮೀ ಮಳೆಯಾಗಿದೆ. ಇದು 2001ರಿಂದೀಚೆಗೆ ಏಳನೇ ಬಾರಿಯ ಮಳೆ ಕೊರತೆಯಾಗಿದೆ.

ನವದೆಹಲಿ: ದೇಶದಲ್ಲಿ ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದೆ. ಐದು ವರ್ಷಗಳಲ್ಲಿಯೇ ಅತ್ಯಧಿಕ ಎಂಬಂತೆ ಶೇ.11 ರಷ್ಟು ಮಳೆ ಕೊರತೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

IMD ಅಂಕಿಅಂಶಗಳ ಪ್ರಕಾರ ಜೂನ್ ನಲ್ಲಿ ಸಾಮಾನ್ಯವಾಗಿ 165.33 ಮಿ. ಮೀಟರ್ ಮಳೆಯಾಗುತಿತ್ತು. ಆದರೆ, ಈ ಬಾರಿ ಶೇ. 147.2 ಮಿ.ಮೀ ಮಳೆಯಾಗಿದೆ. ಇದು 2001ರಿಂದೀಚೆಗೆ ಏಳನೇ ಬಾರಿಯ ಮಳೆ ಕೊರತೆಯಾಗಿದೆ.

ಮೇ 30 ರಂದು ಕೇರಳ ಮತ್ತು ಈಶಾನ್ಯ ಪ್ರದೇಶದಲ್ಲಿ ಆರಂಭವಾದ ನಂತರ ಮಹಾರಾಷ್ಟ್ರದವರೆಗೆ ಸಾಮಾನ್ಯವಾಗಿ ಪ್ರಗತಿ ಸಾಧಿಸಿದ ಮಾನ್ಸೂನ್, ಬಳಿಕ ವೇಗವನ್ನು ಕಳೆದುಕೊಂಡಿತು. ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಛತ್ತೀಸ್ ಗಢ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಲ್ಲಿ ಮಳೆಗಾಗಿ ಕಾಯುವಿಕೆಯನ್ನು ಮತ್ತಷ್ಟು ವಿಸ್ತರಿಸಿತು. ವಾಯುವ್ಯ ಭಾರತದಲ್ಲಿ ಬಿಸಿಗಾಳಿ ಇನ್ನಷ್ಟು ಹದಗೆಡಿಸುತ್ತಿದೆ.

ದೇಶದಲ್ಲಿ ಜೂನ್ 11 ರಿಂದ ಜೂನ್ 27 ರವರೆಗೆ 16 ದಿನ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ. ಇದು ಒಟ್ಟಾರೆ ಸಾಮಾನ್ಯಕ್ಕಿಂತ ಕಡಿಮೆ ಮಳೆಗೆ ಕಾರಣವಾಗಿದೆ ಎಂದು IMD ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ವಾಯುವ್ಯ ಭಾರತದಲ್ಲಿ ಶೇ.33, ಮಧ್ಯ ಭಾರತದಲ್ಲಿ ಶೇ.14, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಜೂನ್‌ನಲ್ಲಿ ದಕ್ಷಿಣ ಭಾರತದಲ್ಲಿ ಮಾತ್ರ ಶೇ. 14 ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

17 ವರ್ಷಗಳಲ್ಲಿ ಜೂನ್ ನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ. ಈ ಅವಧಿಯಲ್ಲಿ ಸಾಮಾನ್ಯ ಅಥವಾ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಯನ್ನು ನಿರೀಕ್ಷಿಸಲಾಗಿದೆ, ವಾಯುವ್ಯದಲ್ಲಿ ಸಾಮಾನ್ಯ ಮತ್ತು ದೇಶದ ಮಧ್ಯ ಮತ್ತು ದಕ್ಷಿಣ ಪರ್ಯಾಯದ್ವೀಪದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುತ್ತದೆ ಎಂದು IMD ಹೇಳಿದೆ.

ಮಾನ್ಸೂನ್ ಭಾರತದ ಕೃಷಿಗೆ ನಿರ್ಣಾಯಕವಾಗಿದೆ. ಶೇ.52 ರಷ್ಟು ಪ್ರದೇಶ ಮಳೆ ಮೇಲೆ ಅವಲಂಬಿತವಾಗಿದೆ. ದೇಶಾದ್ಯಂತ ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ನಿರ್ಣಾಯಕವಾದ ಜಲಾಶಯಗಳನ್ನು ಮರುಪೂರಣಗೊಳಿಸಲು ಇದು ನಿರ್ಣಾಯಕವಾಗಿದೆ. ಜೂನ್ ಮತ್ತು ಜುಲೈ ಅನ್ನು ಕೃಷಿಗೆ ಅತ್ಯಂತ ಪ್ರಮುಖ ಮುಂಗಾರು ತಿಂಗಳುಗಳೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ಈ ವೇಳೆ ಹೆಚ್ಚಿನ ಬಿತ್ತನೆ ನಡೆಯುತ್ತದೆ. ಸದ್ಯ ಎಲ್ ನಿನೋ ಪ್ರವಾಹ ಪರಿಸ್ಥಿತಿಯಿದೆ ಮತ್ತು ಲಾ ನಿನಾ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗಬಹುದು ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT