ಶಿವಸೇನೆ ನಾಯಕ ಅನಿಲ್ ಪರಬ್ 
ದೇಶ

ಮಹಾರಾಷ್ಟ್ರ MLC ಚುನಾವಣೆ: BJP ಅಭ್ಯರ್ಥಿಯನ್ನು ಸೋಲಿಸಿದ ಉದ್ಧವ್ ಬಣದ ಶಿವಸೇನೆ ನಾಯಕ ಅನಿಲ್ ಪರಬ್!

ಶಿವಸೇನೆ-ಯುಬಿಟಿ ನಾಯಕ ಅನಿಲ್ ಪರಬ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂಬೈ ಪದವೀಧರ ಕ್ಷೇತ್ರದಿಂದ BJP ಕಿರಣ್ ಶೆಲಾರ್ ಅವರನ್ನು ಸೋಲಿಸಿದ್ದಾರೆ.

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯ ಫಲಿತಾಂಶದಲ್ಲಿ ಶಿವಸೇನೆ-ಯುಬಿಟಿಗೆ ಖುಷಿಯ ಸುದ್ದಿ ಸಿಕ್ಕಿದೆ. ಶಿವಸೇನೆ-ಯುಬಿಟಿ ನಾಯಕ ಅನಿಲ್ ಪರಬ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂಬೈ ಪದವೀಧರ ಕ್ಷೇತ್ರದಿಂದ BJP ಕಿರಣ್ ಶೆಲಾರ್ ಅವರನ್ನು ಸೋಲಿಸಿದ್ದಾರೆ.

ಮುಂಬೈ ಪದವೀಧರ ಕ್ಷೇತ್ರದಿಂದ ಅನಿತ್ ಪರಬ್ 44,784 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಶೇಲಾರ್ 18,772 ಮತಗಳನ್ನು ಪಡೆದರು. ಜೂನ್ 26ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಸಿಂಧುವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿವೆ.

ಮೊದಲ ಪ್ರಾಶಸ್ತ್ಯದ ಮತದಾನದಲ್ಲಿ ಅನಿಲ್ ಪರಬ್ 44,784 ಮತಗಳನ್ನು ಪಡೆದು ಆಯ್ಕೆಯಾದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವಿನ ನಂತರ ಮುಂಬೈನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಅನಿಲ್ ಪರಬ್ ಸಂಭ್ರಮಿಸಿದರು. ಶಿವಸೇನೆ-ಯುಬಿಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, 'ಅನಿಲ್ ಪರಬ್ ಅವರ ಅದ್ಭುತ ವಿಜಯಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು.

ಮುಂಬೈ ಪದವೀಧರ ಕ್ಷೇತ್ರ, ಕೊಂಕಣ ವಿಭಾಗದ ಪದವೀಧರ ಕ್ಷೇತ್ರ, ನಾಸಿಕ್ ವಿಭಾಗ ಶಿಕ್ಷಕರ ಕ್ಷೇತ್ರ ಮತ್ತು ಮುಂಬೈ ಶಿಕ್ಷಕರ ಕ್ಷೇತ್ರಗಳನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಕಳೆದ ವಾರ ಮತದಾನ ನಡೆದಿತ್ತು.

ಅನಿಲ್ ಪರಬ್ ಯಾರು?

ಅನಿಲ್ ಪರಬ್ ಅವರು ವಿಧಾನ ಪರಿಷತ್ತಿನಲ್ಲಿ ಶಿವಸೇನೆಯನ್ನು ಪ್ರತಿನಿಧಿಸುತ್ತಾರೆ. ಅವರು ಉದ್ಧವ್ ಠಾಕ್ರೆ ಅವರಿಗೆ ನಿಕಟ ನಾಯಕರೆಂದು ಹೆಸರುವಾಸಿಯಾಗಿದ್ದಾರೆ. ಅನಿಲ್ ಪರಬ್ ಅವರು 2012 ಮತ್ತು 2018 ರಲ್ಲಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು. ಈ ಬಾರಿ ಮತ್ತೊಮ್ಮೆ ಶಿವಸೇನೆ-ಯುಬಿಟಿ ಅವರನ್ನು ವಿಧಾನ ಪರಿಷತ್ತಿಗೆ ತಮ್ಮ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT