ದೇಶ

NEET-UG ಮರು ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳ ರ‍್ಯಾಂಕಿಂಗ್'ನಲ್ಲಿ ಬದಲಾವಣೆ!

ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು ನಡೆಸಲಾಗಿದ್ದು ಅವರ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ.

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪರಿಷ್ಕೃತ ರ‍್ಯಾಂಕಿಂಗ್ ಪಟ್ಟಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸೋಮವಾರ ಪ್ರಕಟಿಸಿದೆ.

ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು ನಡೆಸಲಾಗಿದ್ದು ಅವರ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ.

ಈ ಫಲಿತಾಂಶ ಪ್ರಕಟದ ಜೊತೆಗೆ ಎಲ್ಲಾ 24 ಲಕ್ಷ ವಿದ್ಯಾರ್ಥಿಗಳ ರಾಂಕಿಂಗ್ ಕೂಡ ಬದಲಾಗಿದ್ದು, ತಮ್ಮ ತಮ್ಮ ರ್ಯಾಂಕಿಂಗ್ ಯಾವ ಹಂತದಲ್ಲಿ ಏರಿಳಿತವಾದಿರಬಹುದು ಎಂಬುದನ್ನು ವಿದ್ಯಾರ್ಥಿಗಳು ಪರಿಶೀಲಿಸುತ್ತಿದ್ದಾರೆ.

ಮೇ 5 ರಂದು ನಡೆದ ಮೂಲ ನೀಟ್ ಯುಜಿ ಪರೀಕ್ಷೆಯ ಸಮಯದಲ್ಲಿ ಉಂಟಾದ “ಸಮಯದ ನಷ್ಟ” ದಿಂದಾಗಿ ಹೆಚ್ಚುವರಿ ಅಂಕಗಳನ್ನು ಈ 1563 ವಿದ್ಯಾರ್ಥಿಗಳಿಗೆ ನೀಡಲಾಗಿತ್ತು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಈ ಅಭ್ಯರ್ಥಿಗಳು ಪರೀಕ್ಷೆಯನ್ನು ಮರುಪಡೆಯಲು ಅಥವಾ ಗ್ರೇಸ್ ಅಂಕಗಳಿಲ್ಲದೆ ತಮ್ಮ ಮೂಲ ಅಂಕಗಳನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ಕೊಡಲಾಗಿತ್ತು.

ಜೂನ್ 23 ರಂದು ನಡೆದ ಮರು ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಪೈಕಿ 813 ಮಂದಿ ಮಾತ್ರ ಪರೀಕ್ಷೆ ಬರೆಯಲು ಮನಸ್ಸು ಮಾಡಿದ್ದರು.

ಜೂನ್ 4 ರಂದು ಘೋಷಿಸಲಾದ ಮೂಲ NEET UG 2024 ಪರೀಕ್ಷೆಯ ಫಲಿತಾಂಶಗಳು, ಪೇಪರ್ ಸೋರಿಕೆ ಮತ್ತು ಅಕ್ರಮಗಳ ಆರೋಪಗಳಿಂದ ವಿವಾದವನ್ನು ಎದುರಿಸಿದ್ದು, ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಅಂದರೆ 67 ವಿದ್ಯಾರ್ಥಿಗಳು ಈ ಸಲ 720 ರಲ್ಲಿ 720 ಪರಿಪೂರ್ಣ ಅಂಕಗಳನ್ನು ಪಡೆದು ಒಟ್ಟಾರೆ ನೀಟ್ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರು ಮತ್ತು ಶಿಕ್ಷಣ ತಜ್ಞರಲ್ಲಿ ಅನುಮಾನ ಮೂಡಿಸಿತ್ತು. ಶಿಕ್ಷಣ ಸಚಿವಾಲಯವು ಈ ವಿಷಯವನ್ನು ನಂತರ ಸಿಬಿಐ ತನಿಖೆಗೆ ಒಪ್ಪಿಸಿದ್ದು, ಈಗ ಸಿಬಿಐ ತನಿಖೆ ನಡೆಯುತ್ತಿದೆ.

ಮರು ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ NTA ವೆಬ್‌ಸೈಟ್ https://neet.nta.nic.in/ ನಲ್ಲಿ ನೋಡಬಹುದಾಗಿದೆ. ವೆಬ್‌ಸೈಟ್‌ನಲ್ಲಿ ಒದಗಿಸಲಾದ ಹಂತಗಳನ್ನು ಅನುಸರಿಸುವ ಮೂಲಕ ಅವರು ತಮ್ಮ ಸ್ಕೋರ್‌ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT