ಗಾಯಾಳುಗಳು 
ದೇಶ

ಉತ್ತರ ಪ್ರದೇಶ: ಹತ್ರಾಸ್‌ನ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ; 100ಕ್ಕೂ ಅಧಿಕ ಮಂದಿ ಸಾವು

"ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ.

ಹತ್ರಾಸ್‌: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 100 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

"ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಅನೇಕ ಗಾಯಾಳುಗಳನ್ನು ಸಹ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ.

ಪುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗದಲ್ಲಿ ಈ ಘಟನೆ ನಡೆದಿದೆ ಎಂದು ಇಟಾಹ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಜನದಟ್ಟಣೆಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಸಿಕಂದರ ರಾವ್ ಪೊಲೀಸ್ ಠಾಣೆ ಎಸ್‌ಎಚ್‌ಒ ಆಶಿಶ್ ಕುಮಾರ್ ಅವರು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT