ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ TNIE
ದೇಶ

ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ: ಸಿಬಿಐಗೆ ದೆಹಲಿ ಹೈಕೋರ್ಟ್ ನೋಟಿಸ್, ಜುಲೈ 17ಕ್ಕೆ ವಿಚಾರಣೆ ಮುಂದೂಡಿಕೆ

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ನವದೆಹಲಿ: ಅಬಕಾರಿ ನೀತಿ 'ಹಗರಣ'ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಮಂಗಳವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಯಾವುದಾದರೂ ಮರುಪರಿಶೀಲನೆ ಇದ್ದರೆ ಎರಡು ದಿನಗಳಲ್ಲಿ ಮನವಿ ಸಲ್ಲಿಸಬಹುದು ಎಂದು ಹೈಕೋರ್ಟ್, ಕೇಜ್ರಿವಾಲ್ ಅವರ ವಕೀಲರು ಹೇಳಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು, ವಿಚಾರಣಾ ನ್ಯಾಯಾಲಯದ ಜೂನ್ 26 ಸಿಬಿಐ ಕಸ್ಟಡಿಗೆ ಮತ್ತು ಜುಲೈ 12 ರವರೆಗೆ ನ್ಯಾಯಾಂಗ ಬಂಧನದ ಆದೇಶಗಳನ್ನು ಪ್ರಶ್ನಿಸಿದ್ದಾರೆ.

55 ವರ್ಷದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತು. ಅಲ್ಲಿ ಅವರು ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT