ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ TNIE
ದೇಶ

ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ: ಸಿಬಿಐಗೆ ದೆಹಲಿ ಹೈಕೋರ್ಟ್ ನೋಟಿಸ್, ಜುಲೈ 17ಕ್ಕೆ ವಿಚಾರಣೆ ಮುಂದೂಡಿಕೆ

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ನವದೆಹಲಿ: ಅಬಕಾರಿ ನೀತಿ 'ಹಗರಣ'ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಮಂಗಳವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಯಾವುದಾದರೂ ಮರುಪರಿಶೀಲನೆ ಇದ್ದರೆ ಎರಡು ದಿನಗಳಲ್ಲಿ ಮನವಿ ಸಲ್ಲಿಸಬಹುದು ಎಂದು ಹೈಕೋರ್ಟ್, ಕೇಜ್ರಿವಾಲ್ ಅವರ ವಕೀಲರು ಹೇಳಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು, ವಿಚಾರಣಾ ನ್ಯಾಯಾಲಯದ ಜೂನ್ 26 ಸಿಬಿಐ ಕಸ್ಟಡಿಗೆ ಮತ್ತು ಜುಲೈ 12 ರವರೆಗೆ ನ್ಯಾಯಾಂಗ ಬಂಧನದ ಆದೇಶಗಳನ್ನು ಪ್ರಶ್ನಿಸಿದ್ದಾರೆ.

55 ವರ್ಷದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತು. ಅಲ್ಲಿ ಅವರು ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT