ಭೀಕರ ಅಪಘಾತ ಐವರು ಸಾವು 
ದೇಶ

ಮಹಾರಾಷ್ಟ್ರ: ದರ್ಗಾಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಐವರು ಯುವಕರು ದುರ್ಮರಣ

ಮಹಾರಾಷ್ಟ್ರದ ದಿಗಾವಾಲಾದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣದ ಐವರು ಯುವಕರು ಸಾವನ್ನಪ್ಪಿದ್ದಾರೆ.

ದಿಗಾವಾಲಾ: ಮಹಾರಾಷ್ಟ್ರದ ದಿಗಾವಾಲಾದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣದ ಐವರು ಯುವಕರು ಸಾವನ್ನಪ್ಪಿದ್ದಾರೆ.

ಕಳೆದ ಭಾನುವಾರ ನಾರಾಯಣಖೇಡ್‌ನಿಂದ ನಾಲ್ವರು ಮತ್ತು ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾರಾದಿಂದ ಇಬ್ಬರು ಮುಂಬೈಗೆ ಭೇಟಿ ನೀಡಲು ತೆರಳಿದ್ದರು. ಕಾರಿನ ಸ್ಟೇರಿಂಗ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ನಂತರ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತರಲ್ಲಿ ಮೆಹಬೂಬ್ ಖುರೇಷಿ, ಫಿರೋಜ್ ಖುರೇಷಿ, ರಫೀಕ್ ಖುರೇಷಿ, ಫಿರೋಜ್ ಖುರೇಷಿ ಮತ್ತು ಮಜೀದ್ ಪಟೇಲ್ ಸೇರಿದ್ದಾರೆ. ಸೈಯದ್ ಅಮರ್ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಮರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಎಲ್ಲಾ ಆರು ಯುವಕರು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆರು ಕುಟುಂಬಗಳು ಆಘಾತಕ್ಕೆ ಒಳಗಾಗಿವೆ. ಕೂಡಲೇ ದಿಗವಾಲ್‌ಗೆ ತೆರಳುತ್ತಿದ್ದು ಮೃತದೇಹಗಳನ್ನು ಸ್ವಗ್ರಾಮಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT