ನಿನ್ನೆ ಸಂಸತ್ತಿನಲ್ಲಿ ಭಾಷಣ ಮಾಡುತ್ತಾ ಶಿವನ ಫೋಟೋ ಪ್ರದರ್ಶಿಸಿದ ರಾಹುಲ್ ಗಾಂಧಿ  
ದೇಶ

ವಿರೋಧ ಪಕ್ಷದ ನಾಯಕನ ಚೊಚ್ಚಲ ಭಾಷಣಕ್ಕೆ ಕತ್ತರಿ: ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ- ರಾಹುಲ್ ಗಾಂಧಿ

ತೆಗೆದುಹಾಕಲಾದ ಭಾಗಗಳಲ್ಲಿ ಹಿಂದೂಗಳು ಮತ್ತು ಪಿಎಂ ನರೇಂದ್ರ ಮೋದಿ-ಬಿಜೆಪಿ-ಆರ್‌ಎಸ್‌ಎಸ್ ಇತರರ ಬಗ್ಗೆ ಅವರ ಮಾತುಗಳು ಕೂಡ ಸೇರಿವೆ.

ನವದೆಹಲಿ: ಅಲ್ಪಸಂಖ್ಯಾತರು, ನೀಟ್ ವಿವಾದ ಮತ್ತು ಅಗ್ನಿಪಥ್ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಲೋಕಸಭೆಯಲ್ಲಿ ನಿನ್ನೆ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಮಾಡಿದ ಚೊಚ್ಚಲ ಭಾಷಣದ ಹಲವು ಭಾಗಗಳನ್ನು ಸ್ಪೀಕರ್ ಆದೇಶ ಮೇರೆಗೆ ಸಂಸತ್ತಿನ ದಾಖಲೆಗಳಿಂದ ತೆಗೆದುಹಾಕಲಾಗಿದೆ.

ತೆಗೆದುಹಾಕಲಾದ ಭಾಗಗಳಲ್ಲಿ ಹಿಂದೂಗಳು ಮತ್ತು ಪಿಎಂ ನರೇಂದ್ರ ಮೋದಿ-ಬಿಜೆಪಿ-ಆರ್‌ಎಸ್‌ಎಸ್ ಇತರರ ಬಗ್ಗೆ ಅವರ ಮಾತುಗಳು ಕೂಡ ಸೇರಿವೆ.

ನಿನ್ನೆ ಮಧ್ಯಾಹ್ನ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೋಧನೆ ದೇಶದಲ್ಲಿ ಹಿಂಸೆ ಮತ್ತು ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸಿದರು. ಅವರ ಹೇಳಿಕೆಗಳಿಗೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರರು ರಾಹುಲ್ ಗಾಂಧಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ "ಸುಳ್ಳು ಮಾತನಾಡುತ್ತಿದ್ದಾರೆ, ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಟೀಕಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಮೋದಿ ಸರ್ಕಾರದ ವಿರುದ್ಧ ಪ್ರತ್ಯಾರೋಪಗಳ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ. ಭಗವಾನ್ ಶಿವ, ಪ್ರವಾದಿ ಮೊಹಮ್ಮದ್, ಗುರುನಾನಕ್, ಜೀಸಸ್ ಕ್ರೈಸ್ಟ್, ಭಗವಾನ್ ಬುಧ ಮತ್ತು ಭಗವಾನ್ ಮಹಾವೀರರನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಅವರ ಬೋಧನೆಗಳಿಂದ ನಿರ್ಭಯತೆಯ ಕಲ್ಪನೆಯನ್ನು ತೆಗೆದುಕೊಂಡಿದ್ದೇನೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಬಹಳ ಗಂಭೀರವಾದ ವಿಷಯ ಎಂದು ಪ್ರಧಾನಿ ಹೇಳಿದರು. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದರು.

ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಲು ಬಿಜೆಪಿ ನಂತರ ಪತ್ರಿಕಾಗೋಷ್ಠಿ ನಡೆಸಿದರೆ, ಕಾಂಗ್ರೆಸ್ ಕೂಡ ಕೇಂದ್ರದ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಸಂಜೆ ಪತ್ರಿಕಾಗೋಷ್ಠಿ ನಡೆಸಿತು.

ರಾಹುಲ್ ಗಾಂಧಿ ಪ್ರತಿಕ್ರಿಯೆ: ತಮ್ಮ ಭಾಷಣದ ಭಾಗಗಳನ್ನು ಹೊರಹಾಕಿದ್ದಕ್ಕೆ ಇಂದು ಸಂಸತ್ತು ಕಲಾಪಕ್ಕೆ ತೆರಳುವ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಮೋದಿಯವರೇ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು, ಆದರೆ ವಾಸ್ತವದಲ್ಲಿ ಸತ್ಯವನ್ನು ಹೊರಹಾಕಲು ಸಾಧ್ಯವಿಲ್ಲ, ನಾನು ಹೇಳಬೇಕಾಗಿದ್ದನ್ನು ಹೇಳಿದ್ದೇನೆ, ಅದು ಸತ್ಯ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT