ಅಖಿಲೇಶ್ ಯಾದವ್ 
ದೇಶ

ಚುನಾವಣೆಯಲ್ಲಿ ಜನ ಮೋದಿ ಸರ್ಕಾರದ ಅಹಂ ಮುರಿದಿದ್ದಾರೆ, ಕೋಮು ರಾಜಕಾರಣ ಅಂತ್ಯ: ಲೋಕಸಭೆಯಲ್ಲಿ ಅಖಿಲೇಶ್

‘ಜನರು ಸರ್ಕಾರದ ಅಹಂ ಮುರಿದಿದ್ದಾರೆ. ಇದು ಸರ್ಕಾರವಲ್ಲ. ಈ ಬಾರಿ ಸೋತ ಸರ್ಕಾರದವಿದ್ದಂತೆ ಅನಿಸುತ್ತಿದೆ. ಸರ್ಕಾರ ಹೆಚ್ಚಿನ ದಿನ ಇರುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಇಂಡಿಯಾ ಮೈತ್ರಿಗೆ ದೂರೆತ ನೈತಿಕ ಗೆಲುವು ದೊರಕಿದೆ. ಇದು ಸಕಾರಾತ್ಮಕ ರಾಜಕೀಯದ ವಿಜಯ.

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಜನರು ಮೋದಿ ಸರ್ಕಾರದ ಅಹಂ ಮುರಿದಿದ್ದಾರೆ. ಅಲ್ಲದೇ, ಭಾರತದಲ್ಲಿ ಕೋಮು ರಾಜಕೀಯಕ್ಕೆ ಅಂತ್ಯ ಹಾಡಿದ್ದಾರೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಖಿಲೇಶ್ ಯಾದವ್ ಮಂಗಳವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಅಖಿಲೇಶ್, ಚುನಾವಣಾ ಫಲಿತಾಂಶ ಇಂಡಿಯಾ ಬಣಕ್ಕೆ ನೈತಿಕ ಗೆಲುವು ಮತ್ತು ಜವಾಬ್ದಾರಿಯ ಸಂದೇಶವಾಗಿದೆ ಎಂದರು.

‘ಜನರು ಸರ್ಕಾರದ ಅಹಂ ಮುರಿದಿದ್ದಾರೆ. ಇದು ಸರ್ಕಾರವಲ್ಲ. ಈ ಬಾರಿ ಸೋತ ಸರ್ಕಾರದವಿದ್ದಂತೆ ಅನಿಸುತ್ತಿದೆ. ಸರ್ಕಾರ ಹೆಚ್ಚಿನ ದಿನ ಇರುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಇಂಡಿಯಾ ಮೈತ್ರಿಗೆ ದೂರೆತ ನೈತಿಕ ಗೆಲುವು ದೊರಕಿದೆ. ಇದು ಸಕಾರಾತ್ಮಕ ರಾಜಕೀಯದ ವಿಜಯವಾಗಿದೆ ಎಂದು ಅವರು ಹೇಳಿದರು.

INDIA ಬಣ ದೇಶದ ಪರವಾಗಿದೆ ಎಂದು ಇಡೀ ಭಾರತ ಅರ್ಥಮಾಡಿಕೊಂಡಿದೆ. ಈ ಚುನಾವಣೆಯು ಇಂಡಿಯಾ ಬಣದ ನೈತಿಕ ಗೆಲುವು. ಪಿಡಿಎ, ಸಾಮಾಜಿಕ ನ್ಯಾಯ ಚಳುವಳಿಯ ಗೆಲುವು. 2024 ರ ಸಂದೇಶವು ಜವಾಬ್ದಾರಿಯಿಂದ ಕೂಡಿದೆ. ಜೂನ್ 4, 2024 ರಂದು ಭಾರತಕ್ಕೆ ಕೋಮು ರಾಜಕೀಯದಿಂದ ಮುಕ್ತಿ ಪಡೆದ ದಿನವಾಗಿದೆ. ಈ ಚುನಾವಣೆಯಲ್ಲಿ ಕೋಮುವಾದಿ ರಾಜಕೀಯವು ಶಾಶ್ವತವಾಗಿ ಸೋತಿದೆ. ಸಂವಿಧಾನದ ಪರ ಜನರು ಗೆದ್ದಿದ್ದಾರೆ. ಸಂವಿಧಾನ ಗೆದ್ದಿದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಸತ್ತಾತ್ಮಕ ವಿಜಯವಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದರು.

ಇದೇ ವೇಳೆ, ಪೇಪರ್ ಸೋರಿಕೆ ವಿಚಾರವಾಗಿ ಮಾತನಾಡಿದ ಅಖಿಲೇಶ್, ಯುವಕರಿಗೆ ಉದ್ಯೋಗ ನೀಡುವುದನ್ನು ತಪ್ಪಿಸಲು ಉದ್ದೇಶಪೂರ್ವಕವಾಗಿ ಸೋರಿಕೆ ಮಾಡಲಾಗುತ್ತಿದೆ. "ಪೇಪರ್ ಸೋರಿಕೆ ಏಕೆ ನಡೆಯುತ್ತಿದೆ? ಸತ್ಯವೆಂದರೆ ಇದನ್ನು ಸರ್ಕಾರ ಮಾಡುತ್ತಿದೆ. ಆದ್ದರಿಂದ ಅದು ಯುವಕರಿಗೆ ಉದ್ಯೋಗ ನೀಡಬೇಕಾಗಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT