ಅಖಿಲೇಶ್ ಯಾದವ್ 
ದೇಶ

ಉತ್ತರ ಪ್ರದೇಶದಲ್ಲಿ ನಾವು 80ಕ್ಕೆ 80 ಸೀಟು ಗೆದ್ದರೂ ಇವಿಎಂ ನಂಬುವುದಿಲ್ಲ: ಲೋಕಸಭೆಯಲ್ಲಿ ಅಖಿಲೇಶ್

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಇವಿಎಂಗಳನ್ನು ತೆಗೆದುಹಾಕುತ್ತೇವೆ ಎಂದು ಅಖಿಲೇಶ್ ಯಾದವ್ ಹೇಳಿದರು.

ನವದೆಹಲಿ: ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳನ್ನು ನಾವೇ ಗೆದ್ದರೂ ಇವಿಎಂಗಳನ್ನು ನಂಬುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಖಿಲೇಶ್ ಯಾದವ್, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಇವಿಎಂಗಳನ್ನು ತೆಗೆದುಹಾಕುತ್ತೇವೆ ಎಂದು ಹೇಳಿದರು.

"ಮಾದರಿ ನೀತಿ ಸಂಹಿತೆ ಜಾರಿಯಾದಾಗ ಸರ್ಕಾರ ಮತ್ತು ಆಯೋಗವು ಕೆಲವರ ಪರವಾಗಿ ಇತ್ತು. ನಾನು ಆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ಬಯಸುವುದಿಲ್ಲ. ಚುನಾವಣಾ ಆಯೋಗದ ಬಗ್ಗೆ ಎಲ್ಲೋ ಒಂದು ಪ್ರಶ್ನೆ ಹುಟ್ಟುಹಾಕಿದೆ" ಎಂದು ಯಾದವ್ ಹೇಳಿದರು.

"ನಾನು ಈ ಮುಂಚೆಯೂ ಇವಿಎಂಗಳನ್ನು ನಂಬಲಿಲ್ಲ, ಈಗಲೂ ನಾನು ನಂಬುವುದಿಲ್ಲ. ಉತ್ತರ ಪ್ರದೇಶದಲ್ಲಿ ನಾವು ಎಲ್ಲಾ 80 ಸ್ಥಾನಗಳನ್ನು ಗೆದ್ದರೂ ನಾನು ಇವಿಎಂಗಳನ್ನು ನಂಬುವುದಿಲ್ಲ" ಎಂದು ಮಾಜಿ ಸಿಎಂ ಹೇಳಿದರು.

"...ಇವಿಎಂಗಳ ಸಮಸ್ಯೆ ಇನ್ನೂ ಪರಿಹಾರ ಸಿಕ್ಕಿಲ್ಲ ಮತ್ತು ನಾವು ಸಮಾಜವಾದಿಗಳು ಅದರ ಬಗ್ಗೆ ಅಚಲವಾಗಿದ್ದೇವೆ" ಎಂದು ಯಾದವ್ ಹೇಳಿದರು.

ಈ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತದಿದ್ದರೆ ಉತ್ತಮ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT