ದಾರುಂಡಾ ಪ್ರದೇಶದಲ್ಲಿನ ಸೇತುವೆ ಕುಸಿತ 
ದೇಶ

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 15 ದಿನಗಳಲ್ಲಿ 7ನೇ ಘಟನೆ

ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್‌ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಈ ಘಟನೆಗಳ ತನಿಖೆಗಾಗಿ ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಪಾಟ್ನಾ: ಬಿಹಾರದಲ್ಲಿ ಸೇತುವೆಗಳ ಕುಸಿತ ಪ್ರಕರಣ ಮುಂದುವರೆದಿದೆ. ಇಂದು ಬೆಳಗ್ಗೆ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗ ಕುಸಿದಿದೆ. ಇದು ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಜಿಲ್ಲೆಯ ಡಿಯೋರಿಯಾ ಬ್ಲಾಕ್‌ನಲ್ಲಿದ್ದ ಸಣ್ಣ ಸೇತುವೆ ಮಹರಾಜ್ ಗಂಜ್ ನೊಂದಿಗೆ ಅನೇಕ ಗ್ರಾಮಗಳನ್ನು ಸಂಪರ್ಕಿಸುತಿತ್ತು. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿವಾನ್‌ನಲ್ಲಿ ಕಳೆದ 11 ದಿನಗಳಲ್ಲಿ ನಡೆದ ಎರಡನೇ ಸೇತುವೆ ಕುಸಿತದ ಘಟನೆ ಇದಾಗಿದೆ.

ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆ ಪ್ರಗತಿಯಲ್ಲಿದೆ ಎಂದು ಉಪ ಅಭಿವೃದ್ಧಿ ಆಯುಕ್ತ ಮುಕೇಶ್ ಕುಮಾರ್ ತಿಳಿಸಿದ್ದಾರೆ. ಬ್ಲಾಕ್‌ನ ಹಿರಿಯ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತೆರಳಿದ್ದಾರೆ. ಮುಂಜಾನೆ 5 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಪ್ರಾಥಮಿಕ ಮಾಹಿತಿಯ ಪ್ರಕಾರ, 1982-83 ರಲ್ಲಿ ನಿರ್ಮಿಸಲಾದ ಸೇತುವೆ ದುರಸ್ತಿ ಕಾರ್ಯ ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ ಎಂದು ತಿಳಿದುಬಂದಿದೆ ಎಂದು ಕುಮಾರ್ ಹೇಳಿದರು.

ಈ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಗಂಡಕಿ ನದಿಯ ರಭಸಕ್ಕೆ ಸೇತುವೆ ಕುಸಿದಿರಬಹುದೆಂದು ಗ್ರಾಮಸ್ಥರು ಸೂಚಿಸಿದ್ದಾರೆ. ಈ ಘಟನೆಯು ಬಿಹಾರದ ಮೂಲಸೌಕರ್ಯ ಸ್ಥಿತಿಯ ಬಗ್ಗೆ ಆತಂಕವನ್ನು ಹೆಚ್ಚಿಸುತ್ತಿದೆ. ಜೂನ್ 22 ರಂದು ದಾರುಂಡಾ ಪ್ರದೇಶದಲ್ಲಿನ ಸೇತುವೆಯೊಂದರ ಭಾಗ ಕುಸಿದಿತ್ತು. ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್‌ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಈ ಘಟನೆಗಳ ತನಿಖೆಗಾಗಿ ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT