Veteran BJP leader LK Advani admitted to AIIMS 
ದೇಶ

ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು: 10 ದಿನದಲ್ಲಿ 2ನೇ ಬಾರಿಗೆ ಅನಾರೋಗ್ಯ!

ಎಲ್ ಕೆ ಅಡ್ವಾಣಿ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರಿಗೆ ಕಾಲಕಾಲಕ್ಕೆ ತಪಾಸಣೆ ಮಾಡಲಾಗುತ್ತಿದೆ.

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಲ್ ಕೆ ಅಡ್ವಾಣಿ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಮನೆಯಲ್ಲಿ ಕಾಲಕಾಲಕ್ಕೆ ತಪಾಸಣೆ ಮಾಡುತ್ತಾರೆ. ಬುಧವಾರ ರಾತ್ರಿ 9 ಗಂಟೆ ವೇಳೆಗೆ ಅವರಿಗೆ ಅನಾರೋಗ್ಯ ಉಂಟಾಗಿದ್ದು, ನಂತರ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಾಲ್ ಕೃಷ್ಣ ಅಡ್ವಾಣಿ ಹಲವು ವರ್ಷಗಳಿಂದ ರಾಜಕೀಯ ಮತ್ತು ಸಾರ್ವಜನಿಕ ಜೀವನದಿಂದ ದೂರವಿದ್ದಾರೆ.

ಇದಕ್ಕೂ ಮುನ್ನ ಮೂತ್ರದ ಸಮಸ್ಯೆಯಿಂದಾಗಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಜೂನ್ 26ರಂದು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. 96 ವರ್ಷದ ಅಡ್ವಾಣಿ ಅವರನ್ನು ಜೂನ್ 26ರಂದು ರಾತ್ರಿ 10.30ಕ್ಕೆ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿತ್ತು. ಮೂತ್ರ ವಿಸರ್ಜನೆಯ ಸಮಸ್ಯೆಯಿಂದಾಗಿ ಅವರನ್ನು ಮೂತ್ರಶಾಸ್ತ್ರ ವಿಭಾಗಕ್ಕೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳ ನಂತರ ಅವರ ಸ್ಥಿತಿ ಸ್ಥಿರವಾಗಿ ಕಂಡುಬಂದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ಈ ವರ್ಷದ ಮಾರ್ಚ್ 30ರಂದು ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಯಿತು. ಇದು ಅವರಿಗೆ ಮಾತ್ರವಲ್ಲದೆ ಅವರ ಆದರ್ಶ ಮತ್ತು ತತ್ವಗಳಿಗೆ ಸಂದ ಗೌರವವಾಗಿದೆ ಎಂದು ಹೇಳಿದರು. ಈ ಹಿಂದೆ 2015ರಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT