ಹತ್ರಾಸ್ ದಲ್ಲಿ ಯೋಗಿ ಆದಿತ್ಯನಾಥ್ 
ದೇಶ

ಹತ್ರಾಸ್ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಯೋಗಿ ಆದಿತ್ಯನಾಥ್ ಆದೇಶ

ದುರಂತಕ್ಕೆ ಯಾರು ಹೊಣೆ, ಅಥವಾ ಇದು ಪಿತೂರಿಯೇ ಎಂದು ತನಿಖಾ ಸಮಿತಿ ಪತ್ತೆ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ.

ಹತ್ರಾಸ್: 122 ಜನರನ್ನು ಬಲಿ ಪಡೆದ ಹತ್ರಾಸ್ ಕಾಲ್ತುಳಿತ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಿಸಿದ್ದಾರೆ.

ಇಂದು ಬೆಳಗ್ಗೆ ದುರಂತ ನಡೆದ ಹತ್ರಾಸದ ಫುಲ್ರೈ ಗ್ರಾಮಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, ಮೃತಪಟ್ಟವರಲ್ಲಿ ಆರು ಮಂದಿ ಇತರ ರಾಜ್ಯಗಳಿಂದ ಬಂದವರಿದ್ದಾರೆ. ಹರಿಯಾಣದ ನಾಲ್ವರು ಮತ್ತು ಮಧ್ಯಪ್ರದೇಶ ಹಾಗೂ ರಾಜಸ್ಥಾನದ ತಲಾ ಒಬ್ಬರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದರು.

ಕಾಲ್ತುಳಿತ ಪ್ರಕರಣದ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲಾಗುವುದು. ನಿವೃತ್ತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸಹ ಈ ನ್ಯಾಯಾಂಗ ತನಿಖೆಯ ಭಾಗವಾಗಲಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದರು.

ದುರಂತಕ್ಕೆ ಯಾರು ಹೊಣೆ, ಅಥವಾ ಇದು ಪಿತೂರಿಯೇ ಎಂದು ತನಿಖಾ ಸಮಿತಿ ಪತ್ತೆ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳ ತಡೆಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಅನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದರು.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಭೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ.

ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ ನೂರಾರು ಭಕ್ತರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?