ಸಂಗ್ರಹ ಚಿತ್ರ PTI
ದೇಶ

ಕೋಟಾದಲ್ಲಿ ಮುಂದುವರೆದ ಆತ್ಮಹತ್ಯೆ ಸರಣಿ: JEEಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಸೂಸೈಡ್, ವರ್ಷದಲ್ಲಿ 13ನೇ ಪ್ರಕರಣ!

ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ಸ್ ಮತ್ತು ಅಡ್ವಾನ್ಸ್ಡ್‌ಗೆ ತಯಾರಿ ನಡೆಸುತ್ತಿದ್ದ ಬಿಹಾರದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೋಟಾ ದೇಶದೆಲ್ಲೆಡೆಯಿಂದ ವೈದ್ಯಕೀಯ, ಎಂಜಿನಿಯರಿಂಗ್‌ ಪ್ರವೇಶ ಕೋಚಿಂಗ್‌ಗೆ ಬರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಇಂದು ಮತ್ತೆ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ಸ್ ಮತ್ತು ಅಡ್ವಾನ್ಸ್ಡ್‌ಗೆ ತಯಾರಿ ನಡೆಸುತ್ತಿದ್ದ ಬಿಹಾರದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾವೀರನಗರದಲ್ಲಿ ಮನೆಯೊಂದರಲ್ಲಿ ಬಾಡಿಗೆಗೆ ವಾಸವಿದ್ದರು. ಅದರ ಎದುರಿನ ಕೊಠಡಿಯಲ್ಲಿ ವಾಸವಿದ್ದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮನೆಯ ಮಾಲೀಕರಿಗೂ ತಿಳಿಸಿದ್ದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಶವಾಗಾರದಲ್ಲಿರಿಸಿದ್ದಾರೆ. ಇದು ಈ ವರ್ಷದ 13ನೇ ಆತ್ಮಹತ್ಯೆ ಪ್ರಕರಣವಾಗಿದೆ.

ಮೃತರು ಬಿಹಾರದ ನಳಂದ ನಿವಾಸಿ ಸಂದೀಪ್ ಕುಮಾರ್ ಕುರ್ಮಿ ಎಂದು ಮಹಾವೀರ ನಗರ ಪೊಲೀಸ್ ಠಾಣಾಧಿಕಾರಿ ಮಹೇಂದ್ರ ಮಾರು ತಿಳಿಸಿದ್ದಾರೆ. ಕುರ್ಮಿ ಕಳೆದ ಒಂದು ವರ್ಷದಿಂದ ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಹಾಜರಾಗುವ ಮೂಲಕ ಮುಖ್ಯ ಮತ್ತು ಅಡ್ವಾನ್ಸ್‌ಡ್ ಜಂಟಿ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅವರ ಸಹೋದರ ಕೂಡ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ NEET ಯುಜಿಗೆ ತಯಾರಿ ನಡೆಸುತ್ತಿದ್ದಾರೆ. ಇಬ್ಬರೂ ಸಹೋದರರು ಒಂದೇ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಓದುತ್ತಾರೆ. ಆದರೆ ಇನ್ಸ್ಟಿಟ್ಯೂಟ್ನ ಕಟ್ಟಡಗಳು ಬೇರೆಯಾಗಿವೆ.

ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಮಹಾವೀರ ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕಮಲ್ ಕಿಶೋರ್ ಮಾತನಾಡಿ, ಮೃತ ವಿದ್ಯಾರ್ಥಿಯ ಪೋಷಕರು ಸುಮಾರು 5 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಸಹೋದರರಿಬ್ಬರಿಗೂ ರೈಲ್ವೇಯಲ್ಲಿ ಕೆಲಸ ಮಾಡುವ ಅವರ ಚಿಕ್ಕಪ್ಪ ಓದಿನ ವ್ಯವಸ್ಥೆ ಮಾಡಿದ್ದರು. ಮೃತರ ಮರಣೋತ್ತರ ಪರೀಕ್ಷೆಯನ್ನು ಅವರ ಸಹೋದರನ ಸಮ್ಮುಖದಲ್ಲಿ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಹೋದರನಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!