T20 ವಿಶ್ವಕಪ್ ಟ್ರೋಫಿಯೊಂದಿಗೆ ಟೀಂ ಇಂಡಿಯಾ ಆಟಗಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ  
ದೇಶ

T20 ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ: ಪ್ರಧಾನಿ ಮೋದಿ ಭೇಟಿ, ಸಂವಾದ

ಬಾರ್ಬಡೋಸ್‌ನಿಂದ ದೆಹಲಿಗೆ ಬಂದಿಳಿದ ತಂಡಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಜೊತೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ವಿಶ್ವ ಕಪ್​​​​ ಗೆದ್ದ ಖುಷಿಗೆ ಕೇಕ್​​​ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಿಕೊಂಡಿದ್ದಾರೆ.

ನವದೆಹಲಿ: ಬಾರ್ಬಡೋಸ್‌ನಲ್ಲಿ 2024 ರ ಆವೃತ್ತಿಯ ಟಿ 20 ವಿಶ್ವಕಪ್‌ ಗೆದ್ದ ನಂತರ ಇಂದು ಗುರುವಾರ ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಟಿ20 ವಿಶ್ವಕಪ್ ವಿಜೇತರು ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನಿ ಮೋದಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಯವರನ್ನು ಭೇಟಿಯಾಗುವಾಗ ಮೆನ್ ಇನ್ ಬ್ಲೂ ವಿಶೇಷ ಜರ್ಸಿಯನ್ನು ಧರಿಸಿದ್ದರು. ಜೆರ್ಸಿಯ ಮುಂಭಾಗದಲ್ಲಿ 'ಚಾಂಪಿಯನ್ಸ್' ಎಂದು ದಪ್ಪ ಅಕ್ಷರದಲ್ಲಿ ಬರೆಯಲಾಗಿತ್ತು.

ಪ್ರಧಾನಿ ಮೋದಿಯವರು ಟೀಂ ಇಂಡಿಯಾ ಆಟಗಾರರನ್ನು ಅಭಿನಂದಿಸಿ ಅವರೊಂದಿಗೆ ಉಪಾಹಾರ ಸೇವಿಸಿದರು. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್​ ಶಾ ಕೂಡ ಹಾಜರಿದ್ದರು.

ವಿಶ್ವಕಪ್ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ಭಾರತ ತಂಡದ ಆಟಗಾರರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಕ್ಕೂ ಮುನ್ನ ಇಂದು ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗಿನ ಜಾವ 6 ಗಂಟೆಗೆ ಬಂದಿಳಿದ ನಂತರ ಅಲ್ಲಿಂದ ನೇರ ಮೌರ್ಯ ಹೊಟೇಲ್ ಗೆ ತೆರಳಿದರು. ಅಲ್ಲಿ ಬೆಳಗ್ಗೆ ಹೊಟೇಲ್ ಸಿಬ್ಬಂದಿ ಆಟಗಾರರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಇನ್ನು ಇಂದು ಸಂಜೆ 5 ಗಂಟೆಗೆ ಮುಂಬೈನಲ್ಲಿ ಮರೈನ್ ಡ್ರೈವ್ ಮತ್ತು ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡಲಿದ್ದಾರೆ.

ಅಭಿಮಾನಿಗಳ ಹರ್ಷೋದ್ಘಾರ: ಕಳೆದ ವಾರ ಶನಿವಾರ ಬ್ರಿಡ್ಜ್‌ಟೌನ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ಭಾರತದ ವಿಜಯಶಾಲಿ ತಂಡವನ್ನು ಸ್ವಾಗತಿಸಲು ನೂರಾರು ಬೆಂಬಲಿಗರು, ತಮ್ಮ ನೆಚ್ಚಿನವರನ್ನು ಅಭಿನಂದಿಸುವ ಫಲಕಗಳನ್ನು ಹಿಡಿದು ರಾಷ್ಟ್ರಧ್ವಜವನ್ನು ಬೀಸಿದರು.

ನಾವು ಕಳೆದ 13 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೇವೆ. ವಿಶ್ವಕಪ್ ಗೆಲ್ಲುವ ಮೂಲಕ ತಂಡವು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿಕೊಂಡ ಅಭಿಮಾನಿಯೊಬ್ಬರು, ಬೆಳಗ್ಗೆ 4:30 ರಿಂದ ಭಾರತದ ಕೊನೆಯ ವಿಶ್ವಕಪ್ ನ್ನು ಉಲ್ಲೇಖಿಸಿ ಹೇಳಿದರು. ಭಾರತ ಕಳೆದ ಬಾರಿ 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಏಕದಿನ ಪಂದ್ಯದಲ್ಲಿ ವಿಶ್ವಕಪ್ ಗೆದ್ದುಕೊಂಡಿತ್ತು.

ಇಂದು ಬೆಳಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು ಆದರೆ ಅಭಿಮಾನಿಗಳ ಉತ್ಸಾಹ ಮಾತ್ರ ಕಡಿಮೆಯಾಗಿರಲಿಲ್ಲ. ಆಟಗಾರರನ್ನು ಅವರ ಹೋಟೆಲ್‌ಗೆ ಕರೆದೊಯ್ಯಲು T3 ಟರ್ಮಿನಲ್‌ನ ಹೊರಗೆ ಎರಡು ಬಸ್‌ಗಳನ್ನು ನಿಲ್ಲಿಸಲಾಗಿತ್ತು,

ದಣಿದಿದ್ದರೂ ಉತ್ಸುಕರಾಗಿದ್ದ ಆಟಗಾರರು ಕಾಯುತ್ತಿದ್ದ ಅಭಿಮಾನಿಗಳತ್ತ ಕೈ ಬೀಸುವ ಮೂಲಕ ನಗುತ್ತಾ ಸಾಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT