ಅಮೃತ್ ಪಾಲ್ ಸಿಂಗ್, ಇಂಜಿನಿಯರ್ ರಶೀದ್ 
ದೇಶ

ಲೋಕಸಭೆ ಸದಸ್ಯರಾಗಿ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರ!

ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದರೆ, ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಪರಾಧಗಳಿಗಾಗಿ ಅಸ್ಸಾಂನ ದಿಬ್ರುಗಢ್ ಜಿಲ್ಲೆಯ ಜೈಲಿನಲ್ಲಿದ್ದಾರೆ.

ನವದೆಹಲಿ: ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದರೆ, ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಪರಾಧಗಳಿಗಾಗಿ ಅಸ್ಸಾಂನ ದಿಬ್ರುಗಢ್ ಜಿಲ್ಲೆಯ ಜೈಲಿನಲ್ಲಿದ್ದಾರೆ.

ಇಂದು ಬೆಳಗ್ಗೆ ಅವರಿಬ್ಬರನ್ನೂ ಭದ್ರತಾ ಸಿಬ್ಬಂದಿ ಸಂಸತ್ತಿನ ಸಂಕೀರ್ಣಕ್ಕೆ ಕರೆತಂದರು. ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಲೋಕಸಭೆಯ ಸ್ಪೀಕರ್ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ಮೂಲಗಳು ತಿಳಿಸಿವೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ 31 ವರ್ಷದ ಅಮೃತ್ ಪಾಲ್ ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಮತ್ತು ರಶೀದ್ ಜಮ್ಮು -ಕಾಶ್ಮೀರದ ಬಾರಾಮುಲ್ಲಾದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದಿದ್ದರು.

ಜೂನ್ 24 ಮತ್ತು 25 ರಂದು ಇತರ ವಿಜೇತ ಅಭ್ಯರ್ಥಿಗಳೊಂದಿಗೆ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಪ್ರಮಾಣ ವಚನ ಸ್ವೀಕಾರಕ್ಕಾಗಿ ತಿಹಾರ್‌ನಿಂದ ಸಂಸತ್ತಿಗೆ ಪ್ರಯಾಣದ ಸಮಯವನ್ನು ಹೊರತುಪಡಿಸಿ ರಶೀದ್‌ಗೆ ಎರಡು ಗಂಟೆಗಳ ಪೆರೋಲ್ ಮತ್ತು ಅಮೃತ್ ಪಾಲ್ ಸಿಂಗ್‌ಗೆ ಜುಲೈ 5 ರಿಂದ ನಾಲ್ಕು ದಿನಗಳ ಕಸ್ಟಡಿ ಪೆರೋಲ್ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT