ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಒಬ್ಬರನ್ನು ರಕ್ಷಿಸಲು ಮತ್ತೊಬ್ಬರಂತೆ ಬಾವಿಗೆ ಇಳಿದ ಐವರು ಶಂಕಿತ ವಿಷಾನಿಲ ಸೇವಿಸಿ ಸಾವು!

ಬಿರ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಿಕಿರ್ದಾ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ ಜೈಸ್ವಾಲ್, ರಮೇಶ್ ಪಟೇಲ್, ರಾಜೇಂದ್ರ ಪಟೇಲ್, ಜಿತೇಂದ್ರ ಪಟೇಲ್ ಮತ್ತು ಟಿಕೇಶ್ವರ್ ಚಂದ್ರ ಎಂದು ಗುರುತಿಸಲಾಗಿದೆ.

ಜಂಜಗೀರ್-ಚಂಪಾ: ಛತ್ತೀಸ್‌ಗಢದ ಜಂಜಗೀರ್-ಚಂಪಾ ಜಿಲ್ಲೆಯಲ್ಲಿ ಶುಕ್ರವಾರ ಬಾವಿಯೊಳಗೆ ಶಂಕಿತ ವಿಷಕಾರಿ ಅನಿಲ ಸೇವಿಸಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬಿರ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಿಕಿರ್ದಾ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ ಜೈಸ್ವಾಲ್, ರಮೇಶ್ ಪಟೇಲ್, ರಾಜೇಂದ್ರ ಪಟೇಲ್, ಜಿತೇಂದ್ರ ಪಟೇಲ್ ಮತ್ತು ಟಿಕೇಶ್ವರ್ ಚಂದ್ರ ಎಂದು ಗುರುತಿಸಲಾಗಿದೆ ಎಂದು ಬಿಲಾಸ್‌ಪುರ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸಂಜೀವ್ ಶುಕ್ಲಾ ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಜೈಸ್ವಾಲ್ ಅವರು ಬಾವಿಗೆ ಬಿದ್ದ ಮರದ ಪಟ್ಟಿಯೊಂದನ್ನು ಹೊರತೆಗೆಯಲು ಬಾವಿಗೆ ಇಳಿದಿದ್ದಾರೆ. ಆದರೆ ಅವರು ಅಲ್ಲಿಯೇ ಮೂರ್ಛೆ ಹೋಗಿ ಬಿದ್ದಿದ್ದಾರೆ. ನಂತರ ಅವರ ಕುಟುಂಬ ಸದಸ್ಯರು ಸಹಾಯಕ್ಕಾಗಿ ಕೂಗಿದ್ದು, ಪಟೇಲ್ ಕುಟುಂಬದ ಇತರ ಮೂವರು ಬಾವಿಗೆ ಇಳಿದಿದ್ದಾರೆ. ನಾಲ್ವರೂ ಹೊರಗೆ ಬಾರದಿದ್ದಾಗ, ಅವರನ್ನು ರಕ್ಷಿಸಲು ಚಂದ್ರು ಸಹ ಬಾವಿಗೆ ಇಳಿದಿದ್ದು, ಐವರೂ ಮೃತಪಟ್ಟಿದ್ದಾರೆ.

ನಂತರ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೃತದೇಹಗಳನ್ನು ಬಾವಿಯಿಂದ ಹೊರತೆಗೆಯಲು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಲಾಗಿದೆ. ಬಾವಿಯೊಳಗೆ ವಿಷಕಾರಿ ಅನಿಲ ಸೇವಿಸಿದ್ದು, ಉಸಿರಾಡಲು ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಶುಕ್ಲಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT