ಭೋಲೆ ಬಾಬಾ ಆಶ್ರಮ  online desk
ದೇಶ

ಹತ್ರಾಸ್ ಕಾಲ್ತುಳಿತ: ದೆಹಲಿಯಲ್ಲಿ ಪೊಲೀಸರೆದುರು ಮುಖ್ಯ ಆರೋಪಿ ಶರಣು

ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ದೆಹಲಿ: ಜು.2 ರಂದು ಹತ್ರಾಸ್ ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಮುಖ ಆರೋಪಿ ದೇವ್ ಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರೆದುರು ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ.

ಮಧುಕರ್ ಈ ಸತ್ಸಂಗದ ಮುಖ್ಯ ಸೇವಾದಾರರಾಗಿದ್ದರು, ಎಫ್ಐಆರ್ ನಲ್ಲಿ ಈತನ ಹೆಸರನ್ನು ಮಾತ್ರ ದಾಖಲಿಸಲಾಗಿದೆ.

ಮಧುಕರ್ ಅವರ ವಕೀಲ ಎಪಿ ಸಿಂಗ್ ವೀಡಿಯೋ ಸಂದೇಶವೊಂದನ್ನು ಪ್ರಕಟಿಸಿದ್ದು, ತಮ್ಮ ಕಕ್ಷಿದಾರರು ದೆಹಲಿಯಲ್ಲಿ ಶರಣಾಗಿದ್ದಾರೆ ಎಂದು ಹೇಳಿದ್ದಾರೆ. ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಗುರುವಾರದವರೆಗೆ, ಕಾಲ್ತುಳಿತ ನಡೆದ ಸೂರಜ್‌ಪಾಲ್ ಅಲಿಯಾಸ್ ನಾರಾಯಣ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಅವರ ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ 6 ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಏತನ್ಮಧ್ಯೆ, ಹತ್ರಾಸ್ ಕಾಲ್ತುಳಿತದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ತಂಡವು ಇದುವರೆಗೆ 90 ಜನರ ಹೇಳಿಕೆಗಳನ್ನು ದಾಖಲಿಸಿದೆ ಎಂದು ಎಸ್‌ಐಟಿ ಮುಖ್ಯಸ್ಥ ಅನುಪಮ್ ಕುಲಶ್ರೇಷ್ಠ ಶುಕ್ರವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT