ಭೋಲೆ ಬಾಬಾ ಆಶ್ರಮ  online desk
ದೇಶ

ಹತ್ರಾಸ್ ಕಾಲ್ತುಳಿತ: ದೆಹಲಿಯಲ್ಲಿ ಪೊಲೀಸರೆದುರು ಮುಖ್ಯ ಆರೋಪಿ ಶರಣು

ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ದೆಹಲಿ: ಜು.2 ರಂದು ಹತ್ರಾಸ್ ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಮುಖ ಆರೋಪಿ ದೇವ್ ಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರೆದುರು ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ.

ಮಧುಕರ್ ಈ ಸತ್ಸಂಗದ ಮುಖ್ಯ ಸೇವಾದಾರರಾಗಿದ್ದರು, ಎಫ್ಐಆರ್ ನಲ್ಲಿ ಈತನ ಹೆಸರನ್ನು ಮಾತ್ರ ದಾಖಲಿಸಲಾಗಿದೆ.

ಮಧುಕರ್ ಅವರ ವಕೀಲ ಎಪಿ ಸಿಂಗ್ ವೀಡಿಯೋ ಸಂದೇಶವೊಂದನ್ನು ಪ್ರಕಟಿಸಿದ್ದು, ತಮ್ಮ ಕಕ್ಷಿದಾರರು ದೆಹಲಿಯಲ್ಲಿ ಶರಣಾಗಿದ್ದಾರೆ ಎಂದು ಹೇಳಿದ್ದಾರೆ. ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಗುರುವಾರದವರೆಗೆ, ಕಾಲ್ತುಳಿತ ನಡೆದ ಸೂರಜ್‌ಪಾಲ್ ಅಲಿಯಾಸ್ ನಾರಾಯಣ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಅವರ ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ 6 ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಏತನ್ಮಧ್ಯೆ, ಹತ್ರಾಸ್ ಕಾಲ್ತುಳಿತದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ತಂಡವು ಇದುವರೆಗೆ 90 ಜನರ ಹೇಳಿಕೆಗಳನ್ನು ದಾಖಲಿಸಿದೆ ಎಂದು ಎಸ್‌ಐಟಿ ಮುಖ್ಯಸ್ಥ ಅನುಪಮ್ ಕುಲಶ್ರೇಷ್ಠ ಶುಕ್ರವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT