ಆಂಧ್ರ ಸಿಎಂ ಚಂದ್ರಬಾಬು ನಾಯ್ಡು- ತೆಲಂಗಾಣ ಸಿಎಂ ರೇವಂತ್ ರೆಡ್ಡಿ online desk
ದೇಶ

ತೆಲಂಗಾಣ- ಆಂಧ್ರ ಸಿಎಂ ಗಳ ಭೇಟಿ; ವಿಭಜನೆಯ ನಂತರದ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ

ಚಂದ್ರಬಾಬು ನಾಯ್ಡು- ರೇವಂತ್ ರೆಡ್ಡಿ ನೇತೃತ್ವದಲ್ಲಿ ಉಭಯ ರಾಜ್ಯಗಳ ನಿಯೋಗಗಳು ಮತ್ತು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ.

ಹೈದರಾಬಾದ್: ತೆಲಂಗಾಣ- ಆಂಧ್ರಪ್ರದೇಶ ಮುಖ್ಯಮಂತ್ರಿಗಳು 4 ವರ್ಷಗಳಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದು, ರಾಜ್ಯ ವಿಭಜನೆಯ ನಂತರದ ವಿಷಯಗಳನ್ನು ಬಗೆಹರಿಸಿಕೊಳ್ಳುವುದರ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ರಾಜ್ಯಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ರಚನೆಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.

ಮಹಾತ್ಮಾ ಜ್ಯೋತಿರಾವ್ ಫುಲೆ ಪ್ರಜಾ ಭವನದಲ್ಲಿ ಚಂದ್ರಬಾಬು ನಾಯ್ಡು- ರೇವಂತ್ ರೆಡ್ಡಿ ನೇತೃತ್ವದಲ್ಲಿ ಉಭಯ ರಾಜ್ಯಗಳ ನಿಯೋಗಗಳು ಮತ್ತು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ.

ಅಧಿಕಾರಿಗಳ ಸಮಿತಿಯಿಂದ ಪರಿಹರಿಸಲಾಗದ ಸಮಸ್ಯೆಗಳನ್ನು ಸಚಿವರ ಸಮಿತಿಗೆ ಕಳುಹಿಸಲಾಗುವುದು. ಸಚಿವರ ಸಮಿತಿಯೂ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾದರೆ ಮತ್ತೊಮ್ಮೆ ಮುಖ್ಯಮಂತ್ರಿಗಳ ಸಭೆ ನಡೆಸಿ ಬಗೆಹರಿಸಲಾಗುವುದು ಎಂದು ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT