ಸೂರತ್ ಕಟ್ಟಡ ಕುಸಿತ 
ದೇಶ

ಸೂರತ್ ನಲ್ಲಿ ಭೀಕರ ಕಟ್ಟಡ ಕುಸಿತ, ಕನಿಷ್ಠ 7 ಸಾವು, ರಾತ್ರಿ ಇಡೀ ಕಾರ್ಯಾಚರಣೆ

ಗುಜರಾತ್ ನ ಸೂರತ್ ನಲ್ಲಿ ಭೀಕರ ಕಟ್ಟಡ ಕುಸಿತ ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸೂರತ್: ಗುಜರಾತ್ ನ ಸೂರತ್ ನಲ್ಲಿ ಭೀಕರ ಕಟ್ಟಡ ಕುಸಿತ ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸೂರತ್ ನಲ್ಲಿ ಸಚಿನ್ ಪಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 6 ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿದೆ. ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.

ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಎಸ್ ಡಿ ಆರ್ ಎಫ್ ತಂಡ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಈ ವರೆಗೂ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಂತೆಯೇ 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.

2017 ರಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಐದು ಐದು ಕುಟುಂಬಗಳು ವಾಸಿಸುತ್ತಿದ್ದವು. ಪೊಲೀಸರ ಪ್ರಕಾರ, ಕುಸಿತ ಸಂಭವಿಸಿದಾಗ ಹಲವಾರು ನಿವಾಸಿಗಳು ಕೆಲಸದಲ್ಲಿದ್ದರು. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಒಳಗೆ ಮಲಗಿದ್ದರು. ಕಟ್ಟಡವು ಕೇವಲ ಎಂಟು ವರ್ಷಗಳಷ್ಟು ಹಳೆಯದಾಗಿದ್ದರೂ, ಹೆಚ್ಚಿನ ಫ್ಲ್ಯಾಟ್‌ಗಳು ಖಾಲಿ ಮತ್ತು ಶಿಥಿಲಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಸುಮಾರು ಐದು ಫ್ಲಾಟ್‌ಗಳಲ್ಲಿ ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ವಾಸಿಸುತ್ತಿದ್ದರು ಎನ್ನಲಾಗಿದೆ. ಅವಶೇಷಗಳ ಒಳಗಿನಿಂದ ಅವರ ಧ್ವನಿ ನಮಗೆ ಕೇಳಿಸುತ್ತದೆ, ಶೀಘ್ರದಲ್ಲೇ ಅವರನ್ನು ರಕ್ಷಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ