ಕಾಲ್ತುಳಿತ ನಂತರ ಸ್ಥಳದಲ್ಲಿ ಸಿಕ್ಕಿದ ಭೋಲೆ ಬಾಬಾ ಫೋಟೋ ಇರುವ ಲಾಕೆಟ್  
ದೇಶ

ಜನಸಂದಣಿಯಲ್ಲಿ ವಿಷಕಾರಿ ಡಬ್ಬಗಳನ್ನು ತೆರೆದು ಹತ್ರಾಸ್ ಕಾಲ್ತುಳಿತಕ್ಕೆ ಕಾರಣವಾಯಿತು: ಭೋಲೆ ಬಾಬಾ ಪರ ವಕೀಲ

ಜುಲೈ 2ರ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಜನದಟ್ಟಣೆಯಲ್ಲಿ ವಿಷಕಾರಿ ವಸ್ತುವನ್ನು ಹೊಂದಿರುವ ಕ್ಯಾನ್‌ಗಳನ್ನು ಕೆಲವರು ತೆರೆದು ನೂಕುನುಗ್ಗಲು ಉಂಟುಮಾಡಿದರು ಎಂದು ಸಾಕ್ಷಿಗಳು ಹೇಳಿದ್ದಾರೆ ಎಂದು ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಅವರ ಪರ ವಕೀಲ ಎಪಿ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

ನವದೆಹಲಿ: ಜುಲೈ 2ರ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಜನದಟ್ಟಣೆಯಲ್ಲಿ ವಿಷಕಾರಿ ವಸ್ತುವನ್ನು ಹೊಂದಿರುವ ಕ್ಯಾನ್‌ಗಳನ್ನು ಕೆಲವರು ತೆರೆದು ನೂಕುನುಗ್ಗಲು ಉಂಟುಮಾಡಿದರು ಎಂದು ಸಾಕ್ಷಿಗಳು ಹೇಳಿದ್ದಾರೆ ಎಂದು ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಅವರ ಪರ ವಕೀಲ ಎಪಿ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಲ್ತುಳಿತದ ಹಿಂದೆ ಭೋಲೆ ಬಾಬಾ ಅವರ ಹೆಚ್ಚುತ್ತಿರುವ ಜನಪ್ರಿಯತೆ ಕಾರಣದಿಂದ ಕೆಲವರು ಪಿತೂರಿ ನಡೆಸಿದರು ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾನ 'ಸತ್ಸಂಗ'ದ ನಂತರ ನಡೆದ ಕಾಲ್ತುಳಿತದಲ್ಲಿ 121 ಜನರು ಜನರು ಮೃತಪಟ್ಟಿದ್ದು ಅವರಲ್ಲಿ ಹೆಚ್ಚಾಗಿ ಮಹಿಳೆಯರು ಸೇರಿದ್ದಾರೆ.

ಕಾಲ್ತುಳಿತವನ್ನು ಕಂಡ ಪ್ರತ್ಯಕ್ಷದರ್ಶಿಗಳು ನನ್ನ ಬಳಿಗೆ ಬಂದು 15-16 ಜನರು ವಿಷಕಾರಿ ಪದಾರ್ಥದ ಡಬ್ಬಿಗಳನ್ನು ಹೊತ್ತೊಯ್ಯುತ್ತಿದ್ದರು ಎಂದು ಹೇಳಿದರು, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಸಿರುಕಟ್ಟುವಿಕೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳುತ್ತದೆ ಎಂದರು.

ಕಾಲ್ತುಳಿತದ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ ಅವರು, ಪುರುಷರು ತಪ್ಪಿಸಿಕೊಳ್ಳಲು ಸಹಾಯ ಮಾಡಲು ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ನಮ್ಮ ಬಳಿ ಪುರಾವೆಗಳಿವೆ, ಅದನ್ನು ಕೋರ್ಟ್ ಗೆ ಸಲ್ಲಿಸುತ್ತೇವೆ ಎಂದರು.

ನನ್ನನ್ನು ಸಂಪರ್ಕಿಸಿದ ಸಾಕ್ಷಿಗಳು ಹೆಸರು ಹೇಳದಂತೆ ಸೂಚಿಸಿದ್ದಾರೆ, ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದರು.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಸೇರಿದಂತೆ ಒಂಬತ್ತು ಜನರನ್ನು ಇದುವರೆಗೆ ಬಂಧಿಸಲಾಗಿದೆ. ಮಧುಕರ್ ಅವರು 'ಸತ್ಸಂಗ'ದ ಪ್ರಮುಖ ಸಂಘಟಕ ಮತ್ತು ನಿಧಿಸಂಗ್ರಹಕಾರರಾಗಿದ್ದರು, ಅಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು, ಸ್ಥಳೀಯ ಆಡಳಿತ ಅನುಮತಿ ನೀಡಿದ್ದು 80 ಸಾವಿರ ಜನರನ್ನು ಸೇರಿಸಲು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾನನ್ನು ಆರೋಪಿ ಎಂದು ಉಲ್ಲೇಖಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT