ಪುರಿ ಜಗನ್ನಾಥ ರಥೋತ್ಸವ online desk
ದೇಶ

ಪುರಿ ರಥ ಯಾತ್ರೆ: ಲಕ್ಷಾಂತರ ಮಂದಿ ನಡುವೆ ಉಸಿರುಗಟ್ಟಿ ವ್ಯಕ್ತಿ ಸಾವು!

ಸಾವನ್ನಪ್ಪಿದ ಭಕ್ತ ಉಸಿರುಗಟ್ಟಿದ ವಾತಾವರಣದಿಂದ ಮೃತಪಟ್ಟಿದ್ದಾನೆ, ಆದರೆ ಲಕ್ಷಾಂತರ ಮಂದಿ ಸೇರಿದ್ದರೂ ಕಾಲ್ತುಳಿತದಂತಯ ಯಾವುದೇ ಅನಾಹುತಗಳೂ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ಪುರಿ: ಲಕ್ಷಾಂತರ ಮಂದಿ ಸೇರಿದ್ದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಓರ್ವ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದರೆ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುರಿ ಜಗನ್ನಾಥ ರಥ ಯಾತ್ರೆ ದೇಶದಲ್ಲಿ ಅತಿ ಹೆಚ್ಚು ಜನಸಂಖ್ಯೆ ಒಂದೆಡೆ ಸೇರುವ ದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದೆ. 1971 ರಲ್ಲಿ ಹೊರತುಪಡಿಸಿ ಇದೇ ಮೊದಲ ಬಾರಿಗೆ 2 ದಿನಗಳ ಕಾಲ ರಥ ಯಾತ್ರೆ ನಡೆಯುತ್ತಿದ್ದು, ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪುರಿ ಜಗನ್ನಾಥ ರಥಯಾತ್ರೆ ಕಣ್ತುಂಬಿಕೊಳ್ಳುವುದಕ್ಕೆ ಪುರಿ ಕ್ಷೇತ್ರದಲ್ಲಿ ನೆರೆದಿದ್ದಾರೆ.

ಸಾವನ್ನಪ್ಪಿದ ಭಕ್ತ ಉಸಿರುಗಟ್ಟಿದ ವಾತಾವರಣದಿಂದ ಮೃತಪಟ್ಟಿದ್ದಾನೆ, ಆದರೆ ಲಕ್ಷಾಂತರ ಮಂದಿ ಸೇರಿದ್ದರೂ ಕಾಲ್ತುಳಿತದಂತಯ ಯಾವುದೇ ಅನಾಹುತಗಳೂ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ವಿಪರೀತ ಉಷ್ಣತೆ ಮತ್ತು ತೇವಾಂಶದಿಂದ ವ್ಯಕ್ತಿಯ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಅನಿರೀಕ್ಷಿತ ಸಂದರ್ಭಗಳನ್ನು ನಿಭಾಯಿಸುವುದಕ್ಕಾಗಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT