ತಮಿಳುನಾಡು ಬಿಎಸ್ ಪಿ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಬಿಎಸ್ ಪಿ ನಾಯಕಿ ಮಾಯಾವತಿ online desk
ದೇಶ

ತಮಿಳುನಾಡು BSP ರಾಜ್ಯಾಧ್ಯಕ್ಷನ ಹತ್ಯೆ: ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ- ಕೋರ್ಟ್

ಆರ್ಮ್‌ಸ್ಟ್ರಾಂಗ್ ಅವರ ದೇಹವನ್ನು ಪಕ್ಕದ ತಿರುವಳ್ಳುವರ್ ಜಿಲ್ಲೆಯಲ್ಲಿ ಖಾಸಗಿ ಒಡೆತನದ ಒಂದು ಎಕರೆ ಜಾಗದಲ್ಲಿ ಸಮಾಧಿ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ಚೆನ್ನೈ: ಶುಕ್ರವಾರದಂದು (ಜು.05) ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

ಆರ್ಮ್‌ಸ್ಟ್ರಾಂಗ್ ಅವರ ದೇಹವನ್ನು ಪಕ್ಕದ ತಿರುವಳ್ಳುವರ್ ಜಿಲ್ಲೆಯಲ್ಲಿ ಖಾಸಗಿ ಒಡೆತನದ ಒಂದು ಎಕರೆ ಜಾಗದಲ್ಲಿ ಸಮಾಧಿ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ. ಬಿಎಸ್‌ಪಿ ಬೆಂಬಲಿಗರು ಶವಯಾತ್ರೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕೋರ್ಟ್ ಹೇಳಿದೆ.

ಇದಕ್ಕೂ ಮುನ್ನ, ಡಿಎಂ ಕೆ ನೇತೃತ್ವದ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಹತ್ಯೆಯಾದ ಬಿಎಸ್‌ಪಿ ನಾಯಕನ ಪತ್ನಿ ಕೆ ಪೊರ್ಕೋಡಿ ಅವರು ಚೆನ್ನೈನ ಪಕ್ಷದ ಕಚೇರಿಯಲ್ಲಿ ಶವ ಸಂಸ್ಕಾರ ಮಾಡಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 2,600 ಚದರ ಅಡಿ ಬಿಎಸ್‌ಪಿ ಒಡೆತನದಲ್ಲಿದೆ ಎಂದು ಅರ್ಜಿದಾರರು ವಾದಿಸಿದರು.

ನ್ಯಾಯಮೂರ್ತಿ ವಿ ಭವಾನಿ ಸುಬ್ಬರಾಯನ್ ಅವರು, ಮೊದಲೇ ಸೂಚಿಸಿದ ಸ್ಥಳಗಳಲ್ಲಿ ಮಾತ್ರ ಸಮಾಧಿ ಮಾಡಲು ಅನುಮತಿಸಲಾಗಿದೆ ಮತ್ತು ಅರ್ಜಿದಾರರಿಗೆ ರಾಜ್ಯ ಸರ್ಕಾರದ ಅನುಮತಿ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT