ಪ್ರಾಂಶುಪಾಲೆಯನ್ನು ಹೊರದಬ್ಬಿದ ಶಾಲಾ ಆಡಳಿತ ಮಂಡಳಿ 
ದೇಶ

ಉತ್ತರ ಪ್ರದೇಶ: ಪ್ರಾಂಶುಪಾಲೆಯನ್ನೇ ಬಲವಂತವಾಗಿ ಹೊರದಬ್ಬಿದ ಶಾಲಾ ಆಡಳಿತ ಮಂಡಳಿ, Video Viral

ಶಾಲಾ ಆಡಳಿತ ಮಂಡಳಿ ನಿರ್ಧಾರಕ್ಕೆ ವಿರುದ್ಧವಾಗಿ ಕಚೇರಿಗೆ ಆಗಮಿಸಿ ಕುಳಿತಿದ್ದ ಪ್ರಾಂಶುಪಾಲೆಯನ್ನೇ ಹೊರದಬ್ಬಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ.

ಲಖನೌ: ಶಾಲಾ ಆಡಳಿತ ಮಂಡಳಿ ನಿರ್ಧಾರಕ್ಕೆ ವಿರುದ್ಧವಾಗಿ ಕಚೇರಿಗೆ ಆಗಮಿಸಿ ಕುಳಿತಿದ್ದ ಪ್ರಾಂಶುಪಾಲೆಯನ್ನೇ ಹೊರದಬ್ಬಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ.

ಹೌದು.. ಶಾಲಾ ಪ್ರಾಂಶುಪಾಲೆಯನ್ನೇ ಶಾಲಾ ಆಡಳಿತ ಮಂಡಳಿ ಬಲವಂತವಾಗಿ ಎಳೆದಾಡಿ ಹೊರದಬ್ಬಿದ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ವರದಿಯಾಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಬಿಷಪ್ ಜಾನ್ಸನ್ ಗರ್ಲ್ಸ್ ಹೈಸ್ಕೂಲ್​​ನ ಪ್ರಾಂಶುಪಾಲಕಿ ಪಾರುಲ್ ಸೊಲೊಮನ್ ಅವರನ್ನು ಆಡಳಿತ ಮಂಡಳಿಯು ಬಲವಂತವಾಗಿ ಹೊರದಬ್ಬಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್​​ ಆದ ವಿಡಿಯೋದಲ್ಲಿ, ಶಾಲೆಯ ಅಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಗುಂಪು ಪ್ರಾಂಶುಪಾಲರ ಕೊಠಡಿಗೆ ತೆರಳಿ ಪ್ರಾಂಶುಪಾಲೆಯನ್ನು ಕುರ್ಚಿಯಿಂದ ಬಲವಂತವಾಗಿ ಎಳೆದು ಹೊರಹಾಕಿದ್ದಾರೆ. ಇದಲ್ಲದೇ ಅದೇ ಸಮಯದಲ್ಲಿ ಹೊಸ ಪ್ರಾಂಶುಪಾಲರನ್ನು ನೇಮಕ ಮಾಡಿ ಅವರನ್ನು ಕುರ್ಚಿಯಲ್ಲಿ ಕೂರಿಸಿ ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದ್ದಾರೆ.

ಶಾಲೆಯ ಅಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಗುಂಪು ಪ್ರಾಂಶುಪಾಲರ ಕಚೇರಿಗೆ ಪ್ರವೇಶಿಸಿ ಆಕೆಯ ಕುರ್ಚಿಯನ್ನು ಖಾಲಿ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದ ಪ್ರಾಂಶುಪಾಲೆಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ಬಲವಂತವಾಗಿ ಎಳೆದ್ಯೊಯ್ದು ಹೊರಹಾಕಲಾಗಿದೆ. ಬಳಿಕ ಹೊಸ ಪ್ರಾಶುಂಪಾಲರನ್ನು ನೇಮಕ ಮಾಡಲಾಗಿದೆ. ಈ ಘಟನೆಯು ಶಿಕ್ಷಣದ ಸ್ಥಿತಿ ಮತ್ತು ಶಾಲಾ ಆಡಳಿತಗಾರರ ವರ್ತನೆಯ ಬಗ್ಗೆ ಭಾರಿ ಚರ್ಚೆ ಹುಟ್ಟುಹಾಕಿದೆ.

ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಾಶುಂಪಾಲೆ ಪಾರುಲ್ ಸೊಲೊಮನ್ ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT