ಅಸ್ಸಾಂ ಪ್ರವಾಹ 
ದೇಶ

Assam Floods: ಪ್ರವಾಹಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮುಳುಗಡೆ, 132 ವನ್ಯಮೃಗ ಸಾವು!

ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಗುವಾಹತಿ: ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಪ್ರವಾಹದಲ್ಲಿ ಕನಿಷ್ಠ 131 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ.

ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಚಿಕಿತ್ಸೆಯ ಸಮಯದಲ್ಲಿ ಒಟ್ಟು 25 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು ಇವುಗಳಲ್ಲಿ 17 ಹಂದಿ ಜಿಂಕೆಗಳು, ಜೌಗು ಜಿಂಕೆ, ಮಕಾಕ್ ಮತ್ತು ಓಟರ್ ನಾಯಿ ಸೇರಿವೆ.

ಅರಣ್ಯಾಧಿಕಾರಿಗಳು 85 ಹಂದಿ, ಎರಡು ಖಡ್ಗಮೃಗ, ಕಡವೆ ಮತ್ತು ಗೂಬೆ ಮತ್ತು ಜೌಗು ಜಿಂಕೆ, ಮೊಲ, ಮಕಾಕ್, ಓಟರ್, ಆನೆ ಮತ್ತು ಕಾಡಿನ ಬೆಕ್ಕುಗಳನ್ನು ರಕ್ಷಿಸಿದ್ದಾರೆ. ಅಂತೆಯೇ ಪ್ರಸ್ತುತ, 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017 ರಲ್ಲಿ ಸಂಭವಿಸಿದ ಪ್ರವಾಹದಲ್ಲಿ 350 ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿದ್ದವು. ಇದಾದ ಬಳಿಕ ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರವಾಹದಲ್ಲಿ ಸಾವನ್ನಪ್ಪಿದ ಪ್ರಾಣಿಗಳ ಸಂಖ್ಯೆ 150ಗಡಿಯತ್ತ ಸಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT