ಅಸ್ಸಾಂ ಪ್ರವಾಹ 
ದೇಶ

Assam Floods: ಪ್ರವಾಹಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮುಳುಗಡೆ, 132 ವನ್ಯಮೃಗ ಸಾವು!

ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಗುವಾಹತಿ: ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಪ್ರವಾಹದಲ್ಲಿ ಕನಿಷ್ಠ 131 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ.

ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಚಿಕಿತ್ಸೆಯ ಸಮಯದಲ್ಲಿ ಒಟ್ಟು 25 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು ಇವುಗಳಲ್ಲಿ 17 ಹಂದಿ ಜಿಂಕೆಗಳು, ಜೌಗು ಜಿಂಕೆ, ಮಕಾಕ್ ಮತ್ತು ಓಟರ್ ನಾಯಿ ಸೇರಿವೆ.

ಅರಣ್ಯಾಧಿಕಾರಿಗಳು 85 ಹಂದಿ, ಎರಡು ಖಡ್ಗಮೃಗ, ಕಡವೆ ಮತ್ತು ಗೂಬೆ ಮತ್ತು ಜೌಗು ಜಿಂಕೆ, ಮೊಲ, ಮಕಾಕ್, ಓಟರ್, ಆನೆ ಮತ್ತು ಕಾಡಿನ ಬೆಕ್ಕುಗಳನ್ನು ರಕ್ಷಿಸಿದ್ದಾರೆ. ಅಂತೆಯೇ ಪ್ರಸ್ತುತ, 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017 ರಲ್ಲಿ ಸಂಭವಿಸಿದ ಪ್ರವಾಹದಲ್ಲಿ 350 ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿದ್ದವು. ಇದಾದ ಬಳಿಕ ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರವಾಹದಲ್ಲಿ ಸಾವನ್ನಪ್ಪಿದ ಪ್ರಾಣಿಗಳ ಸಂಖ್ಯೆ 150ಗಡಿಯತ್ತ ಸಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel