ಸಂಸತ್ ನಲ್ಲಿ ರಾಹುಲ್ ಗಾಂಧಿ ಭಾಷಣ- ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ 
ದೇಶ

ಹಿಂದೂ, ಹಿಂಸಾಚಾರದ ಹೇಳಿಕೆ: ರಾಹುಲ್ ಬೆನ್ನಿಗೆ ನಿಂತ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ!

ರಾಹುಲ್ ಗಾಂಧಿ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ನಾವು ರಾಹುಲ್ ಗಾಂಧಿ ಅವರ ಇಡೀ ಭಾಷಣವನ್ನು ಗಮನವಿಟ್ಟು ಕೇಳಿದ್ದೇವೆ. ಹಿಂದೂ ಧರ್ಮವು ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ ಎಂದಿದ್ದಾರೆ.

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.

ಈ ಮಧ್ಯೆ ಉತ್ತರಾಮ್ನಾಯ ಜ್ಯೋತಿಷ್ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಕಾಂಗ್ರೆಸ್ ನಾಯಕ ಬೆಂಬಲಕ್ಕೆ ಧಾವಿಸಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ಅಂಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿ ಇಡೀ ಹಿಂದೂ ಸಮುದಾಯವನ್ನು ಹಿಂಸಾಚಾರಕ್ಕೆ ತಳುಕುಹಾಕುವುದು ಗಂಭೀರವಾದ ವಿಷಯ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ನಾವು ರಾಹುಲ್ ಗಾಂಧಿ ಅವರ ಇಡೀ ಭಾಷಣವನ್ನು ಗಮನವಿಟ್ಟು ಕೇಳಿದ್ದೇವೆ. ಹಿಂದೂ ಧರ್ಮವು ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ, ”ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

ರಾಹುಲ್ ಗಾಂಧಿ ಭಾಷಣದ ಆಯ್ದ ಪ್ರಸಾರವನ್ನಷ್ಟೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿ ಪ್ರಚಾರ ಮಾಡುತ್ತಿರುವುದನ್ನು ಮಠಾಧೀಶರು ಟೀಕಿಸಿದ್ದಾರೆ. ಸತ್ಯಗಳನ್ನು ತಿರುಚುವವರಿಗೆ ಉತ್ತರದಾಯಿತ್ವವನ್ನು ಅವಿಮುಕ್ತೇಶ್ವರಾನಂದ ಸರಸ್ವತಿ ಒತ್ತಾಯಿಸಿದ್ದಾರೆ.

"ಗಾಂಧಿ ಹೇಳಿಕೆಯ ಆಯ್ದ ತುಣುಕುಗಳನ್ನು ಮಾತ್ರ ಪ್ರಚಾರ ಮಾಡುವುದು ತಪ್ಪುದಾರಿಗೆಳೆಯುವ ಮತ್ತು ಅನೈತಿಕವಾಗಿದೆ" ಎಂದು ಅವರು ಟೀಕಿಸಿದ್ದಾರೆ. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದೂ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

SCROLL FOR NEXT