ಪ್ರಕಾಶ್ ಅಂಬೇಡ್ಕರ್ Prakash Ambedkar
ದೇಶ

ಮಹಾರಾಷ್ಟ್ರ: ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ VBA

ಲೋಕಸಭಾ ಚುನಾವಣೆ ವೇಳೆ ಸೀಟು ಹಂಚಿಕೆ ವಿಚಾರವಾಗಿ ದೂರವಾಗಿದ್ದ ಶಿವಸೇನಾ (UTB) ಮತ್ತು ವಂಚಿತ್ ಬಹುಜನ್ ಅಘಾಡಿ (ವಿಬಿಎ) ನಡುವಿನ ಮೈತ್ರಿ ಅಂತ್ಯವಾಗಿದೆ.

ಮುಂಬೈ: ಲೋಕಸಭಾ ಚುನಾವಣೆ ವೇಳೆ ಸೀಟು ಹಂಚಿಕೆ ವಿಚಾರವಾಗಿ ದೂರವಾಗಿದ್ದ ಶಿವಸೇನಾ (UTB) ಮತ್ತು ವಂಚಿತ್ ಬಹುಜನ್ ಅಘಾಡಿ (ವಿಬಿಎ) ನಡುವಿನ ಮೈತ್ರಿ ಅಂತ್ಯವಾಗಿದೆ.

ಈ ಬಗ್ಗೆ ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್‌ ಭಾನುವಾರ ಮಾಹಿತಿ ನೀಡಿದ್ದು, ಶಿವಸೇನಾ (ಯುಟಿಬಿ) ಜೊತೆಗಿನ ಮೈತ್ರಿ ಅಂತ್ಯವಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ವಿಬಿಎ ಕಳೆದ ಲೋಕಸಭೆ ಚುನಾವಣೆ ವೇಳೆ ಸೀಟು ಹಂಚಿಕೆ ಸಂಬಂಧ ಉಂಟಾದ ಅಸಮಾಧಾನದ ಬಳಿಕ ಮೈತ್ರಿಯಿಂದ ಹೊರಗೆ ಬಂದಿತ್ತು. ಇಂಡಿಯಾ ಮೈತ್ರಿಕೂಟಕ್ಕೆ ಸೇರುವ ಮೊದಲು ವಿಬಿಎ ಶಿವಸೇನಾ (ಯುಟಿಬಿ) ಜೊತೆ ಮೈತ್ರಿ ಮಾಡಿಕೊಂಡಿತ್ತು. ಇದೀಗ ಶಿವಸೇನೆಯೊಂದಿಗೂ ವಿಬಿಎ ಮೈತ್ರಿ ಅಂತ್ಯಗೊಳಿಸಿದೆ.

ಈ ಬಗ್ಗೆ ಮಾತನಾಡಿದ ಪ್ರಕಾಶ್ ಅಂಬೇಡ್ಕರ್ ‘ಮೈತ್ರಿ ಅಂತ್ಯವಾಗಿದೆ. ಇನ್ನು ಏನೂ ಉಳಿದಿಲ್ಲ’ ಎಂದು ಶಿವಸೇನಾ (ಯುಟಿಬಿ) ಜೊತೆಗಿನ ಮೈತ್ರಿ ಸಂಬಂಧ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ಶಿವಸೇನಾ (ಯುಟಿಬಿ) ಹಾಗೂ ವಿಬಿಎ ನಡುವೆ 2023ರ ಜನವರಿಯಲ್ಲಿ ಮೈತ್ರಿ ಏರ್ಪಟ್ಟಿತ್ತು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಪ್ರಕಾಶ್‌ ಅಂಬೇಡ್ಕರ್‌ ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕೋಲಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಅನುಪ್ ಧೋತ್ರೆ ವಿರುದ್ಧ ಸೋಲನುಭವಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT