ಹತ್ರಾಸ್ ಕಾಲ್ತುಳಿತ ನಡೆದ ಸ್ಥಳ 
ದೇಶ

Hathras stampede ಹಿಂದೆ ಕಾಣದ ಕೈಗಳ ಕೈವಾಡ ಎಂದ SIT; ಅಧಿಕಾರಿ ಅಮಾನತು ಮಾಡಿದ ಸಿಎಂ ಯೋಗಿ ಸರ್ಕಾರ!

SIT ಸಲ್ಲಿಕೆ ಮಾಡಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

ಲಖನೌ: 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದ ಹಿಂದೆ ''ಕಾಣದ ಕೈಗಳ ಕೈವಾಡ''ವಿರಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.

ಹೌದು.. ಹತ್ರಾಸ್ ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದ್ದು, ಇದಕ್ಕೆ ಇಂಬು ನೀಡುವಂತೆ ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಸ್ಥಳೀಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (Sub-divisional Magistrate-SDM) ಅಧಿಕಾರಿಯನ್ನು ಅಮಾನತು ಮಾಡಿದೆ.

ಹತ್ರಾಸ್ ಕಾಲ್ತುಳಿತದ ಬಗ್ಗೆ ಎಸ್‌ಐಟಿ ವರದಿಯ ಆಧಾರದ ಮೇಲೆ ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಸ್ಥಳೀಯ ಎಸ್‌ಡಿಎಂ ಮಾತ್ರವಲ್ಲದೇ ಸರ್ಕಲ್ ಅಧಿಕಾರಿ ಮತ್ತು ಇತರ ನಾಲ್ವರ ಅಧಿಕಾರಿಗಳನ್ನು ಕೂಡ ಅಮಾನತುಗೊಳಿಸಿದೆ. ಸರ್ಕಾರದ ಈ ನಡೆಯೇ ಘಟನೆಯ ಹಿಂದೆ “ದೊಡ್ಡ ಪಿತೂರಿ” ಇರಬಹುದು ಎಂದು ಹೇಳಲಾಗುತ್ತಿದೆ.

SIT ಸಲ್ಲಿಕೆ ಮಾಡಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರು ಜನಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ.

ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಎಸ್‌ಐಟಿ ವರದಿಯ ಆಧಾರದ ಮೇಲೆ ಎಸ್‌ಡಿಎಂ, ಸರ್ಕಲ್ ಆಫೀಸರ್, ತಹಸೀಲ್ದಾರ್ ಸೇರಿದಂತೆ ಆರು ಮಂದಿಯನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!